ಆದಾಯ ತೆರಿಗೆ ಇಲಾಖಾಧಿಕಾರಿಗಳಿಂದ ರಾಜ್ಯದ ವಿವಿಧೆಡೆ ದಿಢೀರ್ ದಾಳಿ

Update: 2019-03-15 06:25 GMT

ಬೆಂಗಳೂರು, ಮಾ. 15: ಬೆಂಗಳೂರು ಮತ್ತು ಹಾವೇರಿಯಲ್ಲಿ ಶುಕ್ರವಾರ ಏಕಕಾಲಕ್ಕೆ ದಾಳಿ ನಡೆಸಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸುಮಾರು 25 ಲಕ್ಷ  ರೂ. ವಶಪಡಿಸಿಕೊಂಡಿರುವ ಬಗ್ಗೆ ವರದಿಯಾಗಿದೆ.

ಲೋಕಸಭೆ ಚುನಾವಣೆಗಾಗಿ ಗುತ್ತಿಗೆದಾರರಿಂದ ಹಣ ಸಂಗ್ರಹಿಸುತ್ತಿದ್ದ ಆರೋಪದಲ್ಲಿ ಇಂಜಿನಿಯರ್ ಓರ್ವ​​​​​​​​​​​​​​​​​​​​​​​​​​​​​​​​​​​​​​​​​​​​​​​ ಐಟಿ ಬಲೆಗೆ ಬಿದ್ದಿದ್ದಾನೆ ಎಂದು ತಿಳಿದುಬಂದಿದೆ. ಆತ ಬೆಂಗಳೂರಿನ ಹೋಟೆಲ್​​ವೊಂದರ ರೂಮಿನಲ್ಲಿ ಹಣ ಸಂಗ್ರಹಿಸುತಿದ್ದ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬೆಂಗಳೂರಿನ ಹಲವು ಹೋಟೆಲ್ ಗಳಿಗೆ ಅಧಿಕಾರಿಗಳು ದಾಳಿ ಮಾಡಿ ತಪಾಸಣೆ ಮಾಡುತಿದ್ದಾರೆ. 

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ರಾಜ್ಯದ ವಿವಿಧೆಡೆ ದಿಢೀರ್ ದಾಳಿ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News