ವೈ.ಎಸ್. ವಿವೇಕಾನಂದ ರೆಡ್ಡಿ ಮೃತದೇಹ ಪತ್ತೆ

Update: 2019-03-15 19:02 GMT

ಅಮರಾವತಿ, ಮಾ. 15: ಮಾಜಿ ಸಚಿವ ಹಾಗೂ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್. ರಾಜಶೇಖರ ರೆಡ್ಡಿ ಅವರ ಕಿರಿಯ ಸಹೋದರ ವೈ.ಎಸ್. ವಿವೇಕಾನಂದ ರೆಡ್ಡಿ ಅವರ ಮೃತದೇಹ ಆಂದ್ರಪ್ರದೇಶದ ಕಡಪ ಜಿಲ್ಲೆಯ ಅಮರಾವತಿಯಲ್ಲಿರುವ ಅವರ ನಿವಾಸದಲ್ಲಿ ಪತ್ತೆಯಾಗಿದೆ.

ವೈ.ಎಸ್. ವಿವೇಕಾನಂದ ರೆಡ್ಡಿ ಅವ್ತರದ್ದು ಸಹಜ ಸಾವು ಅಲ್ಲ. ಕೊಲೆ ಎಂದು ಅವರ ಕುಟುಂಬದ ಸದಸ್ಯರು ಆರೋಪಿಸಿದ್ದಾರೆ. ಮಲಗುವ ಕೊಠಡಿ ಹಾಗೂ ಸ್ನಾನಗೃಹದಲ್ಲಿ ರಕ್ತದ ಕಲೆಗಳು ಕಂಡು ಬಂದಿರುವುದರಿಂದ ಕೊಲೆ ಎಂಬ ಶಂಕೆಯಲ್ಲಿ ವಿವೇಕಾನಂದ ರೆಡ್ಡಿ ಅವರ ಆಪ್ತ ಕಾರ್ಯದರ್ಶಿ ಎಂ.ವಿ. ಕೃಷ್ಣ ರೆಡ್ಡಿ ಪುಲಿವೆಂದುಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 68ರ ಹರೆಯದ ವಿವೇಕಾನಂದ ರೆಡ್ಡಿ ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಇದು ಸಹಜ ಸಾವು ಅಲ್ಲ. ಕೊಲೆ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ವಿವೇಕಾನಂದ ರೆಡ್ಡಿ ಅವರ ಸೋದರಳಿಯ ಹಾಗೂ ಮಾಜಿ ಶಾಸಕ ವೈ.ಎಸ್. ಅವಿನಾಶ್ ರೆಡ್ಡಿ ಆಗ್ರಹಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News