ಮುಂದಿನ ಪ್ರಧಾನಿಯಾಗಲಿರುವ ರಾಹುಲ್ ರಾಜ್ಯದಿಂದ ಸ್ಪರ್ಧಿಸಲಿ: ಮಾಜಿ ಸಿಎಂ ಸಿದ್ದರಾಮಯ್ಯ
Update: 2019-03-15 15:10 GMT
ಬೆಂಗಳೂರು, ಮಾ.15: ಲೋಕಸಭಾ ಚುನಾವಣೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದ ಯಾವುದಾದರೂ ಒಂದು ಕ್ಷೇತ್ರದಿಂದ ಸ್ಪರ್ಧಿಸಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಹ್ವಾನ ನೀಡಿದ್ದಾರೆ.
ಈ ಸಂಬಂಧ ಟ್ವಿಟ್ ಮಾಡಿರುವ ಸಿದ್ದರಾಮಯ್ಯ, ರಾಹುಲ್ ಗಾಂಧಿ ಕರ್ನಾಟಕದಿಂದ ಸ್ಪರ್ಧಿಸಬೇಕು ಎಂಬುದು ನಮ್ಮ ಇಚ್ಛೆ. ಕರ್ನಾಟಕ ಸದಾ ಕಾಲ ರಾಷ್ಟ್ರ ಕಾಂಗ್ರೆಸ್ ನಾಯಕರನ್ನು ಬೆಂಬಲಿಸಿತ್ತು ಹಾಗೂ ಪ್ರೇರೇಪಿಸಿದೆ. ಇಂದಿರಾ ಗಾಂಧಿ ಹಾಗೂ ಸೋನಿಯಾ ಗಾಂಧಿ ವಿಚಾರದಲ್ಲಿ ಅದು ಸಾಬೀತಾಗಿದೆ. ನಾವು ನಮ್ಮ ಮುಂದಿನ ಪ್ರಧಾನಮಂತ್ರಿ ಆಗಲಿರುವ ರಾಹುಲ್ ಗಾಂಧಿಯವರು ಕರ್ನಾಟಕದಿಂದ ಸ್ಪರ್ಧಿಸಲು ಬಯಸುತ್ತೇವೆ ಮತ್ತು ರಾಜ್ಯದಲ್ಲಿ ಅಭಿವೃದ್ಧಿಯ ಹೊಸ ಶಕೆ ಆರಂಭವಾಗಲಿ ಎಂದು ತಿಳಿಸಿದ್ದಾರೆ.