ಹಣ ಪತ್ತೆ ಪ್ರಕರಣ: ಆಯೋಗಕ್ಕೆ ಬಿಜೆಪಿ ದೂರು

Update: 2019-03-15 16:23 GMT

ಬೆಂಗಳೂರು, ಮಾ.15: ಖಾಸಗಿ ಹೊಟೇಲ್ ಮೇಲೆ ಐಟಿ ದಾಳಿ ನಡೆಸಿ, 2 ಕೋಟಿ ರೂ. ನಗದು ಜಪ್ತಿ ಮಾಡಿರುವ ಪ್ರಕರಣ ಸಂಬಂಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಶುಕ್ರವಾರ ಶೇಷಾದ್ರಿ ರಸ್ತೆಯಲ್ಲಿರುವ ರಾಜ್ಯ ಚುನಾವಣಾಧಿಕಾರಿ ಕಚೇರಿಯಲ್ಲಿ ಬಿಜೆಪಿ ಮುಖಂಡರು ದೂರು ಸಲ್ಲಿಸಿ, ಈ ನಗದು ಮೂಲದ ತನಿಖೆ ನಡೆಸುವಂತೆ ಆಗ್ರಹ ಮಾಡಿದರು.

ಬಳಿಕ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ರಾಜಮಹಲ್ ಹೊಟೇಲ್‌ನಲ್ಲಿ 2 ಕೋಟಿಗಿಂತ ಹೆಚ್ಚಿನ ಹಣ ಪತ್ತೆಯಾಗಿದೆ. ಅಧಿಕಾರಿ ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದೇವೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News