ಒಂಟಿ ಮಹಿಳೆ ಕೊಲೆ ಪ್ರಕರಣ: ಆರೋಪಿಗೆ ನ್ಯಾಯಾಂಗ ಬಂಧನ

Update: 2019-03-15 16:39 GMT

ಕುಂದಾಪುರ, ಮಾ.15: ಹೆಮ್ಮಾಡಿ ಸಮೀಪದ ಹರೆಗೋಡು ಸುಳ್ಸೆ ಒಂಟಿ ಮಹಿಳೆಯ ಕೊಲೆ ಪ್ರಕರಣದ ಆರೋಪಿ ಜಡ್ಕಲ್ ಗ್ರಾಮದ ಸುಳ್ಕೋಡು ನಿವಾಸಿ ರವಿರಾಜ್ (31) ಎಂಬಾತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮಾ.11ರಂದು ಬಂಧಿಸಲ್ಪಟ್ಟ ಆರೋಪಿಯನ್ನು ಅದೇ ದಿನ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿ ಐದು ದಿನಗಳ ಪೊಲೀಸ್ ಕಸ್ಟಡಿಗೆ ಪಡೆದು ಕೊಂಡಿದ್ದರು. ಇಂದಿಗೆ ಆತ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಪೊಲೀಸರು ಕುಂದಾಪುರ ಒಂದು ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.

ನ್ಯಾಯಾಧೀಶ ಶ್ರೀಕಂಠ ಎನ್.ಎ. ಆರೋಪಿಯನ್ನು ಮಾ.29ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದರು. ಸಹಾಯಕ ಸರಕಾರಿ ಅಭಿಯೋಜಕಿ ಸುಮಂಗಲ ನಾಯಕ್ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News