ಬಂಟ್ವಾಳ ಜೆಡಿಎಸ್ ಕಾರ್ಯಕರ್ತರ ಸಮಾಲೋಚನಾ ಸಭೆ

Update: 2019-03-15 17:31 GMT

ಬಂಟ್ವಾಳ, ಮಾ. 15: ಜೆಡಿಎಸ್ ಕಾರ್ಯಕರ್ತರ ಸಮಾಲೋಚನಾ ಸಭೆಯು ಬಿ.ಸಿ.ರೋಡ್ ರಿಕ್ಷಾಭವನದಲ್ಲಿ ಶುಕ್ರವಾರ ಕ್ಷೇತ್ರ ಅಧ್ಯಕ್ಷ ಬಿ.ಮೋಹನ್ ಅವರ ಅಧ್ಯಕ್ಷತೆಯಲ್ಲಿ ಜರಗಿತು.

ಮಾಜಿ ಸಚಿವ ಅಮರನಾಥ ಶೆಟ್ಟಿ ಮಾತನಾಡಿ, ಈ ಚುಣಾವಣೆಯಲ್ಲಿ ದ.ಕ.ಜಿಲ್ಲೆಯಲ್ಲಿ ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದು, ಮೈತ್ರಿ ಧರ್ಮ ಪಾಲಿಸುವಂತೆ ಕಾರ್ಯಕರ್ತರಿಗೆ ಸಲಹೆ ನೀಡಿದರು.

ರಾಜ್ಯ ಉಪಾಧ್ಯಕ್ಷ ಎಂ.ಬಿ.ಸದಾಶಿವ ಕೇಂದ್ರ ಸರಕಾರದ ವೈಫಲ್ಯ ಹಾಗೂ ರಾಜ್ಯ ಸರಕಾರದ ಸಾಧನೆಯ ಬಗ್ಗೆ ವಿವರಣೆ ನೀಡಿದರು. 

ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಶಫಿ ಮಾತನಾಡಿ, ಪಕ್ಷ ಸಂಘಟನೆಗೆ ಜಿಲ್ಲಾ ನಾಯಕರು ಕ್ಷೇತ್ರದಲ್ಲಿ ನಿರಂತರವಾಗಿ ಸಂಪರ್ಕದಲ್ಲಿರುವಂತೆ ಹಾಗೂ ಪಕ್ಷದ ಕಚೇರಿ ತಕ್ಷಣ ತೆರೆಯಲು ಸಲಹೆ ನೀಡಿದರು.

ಕಾಂಗ್ರೆಸ್ ನಾಯಕರು ಚುನಾವಣಾ ಸಮಯದಲ್ಲಿ ನಮ್ಮ ಪಕ್ಷವನ್ನು ಹಾಗೂ ಕಾರ್ಯಕರ್ತರನ್ನು ಗೌರವಯುತವಾಗಿ ನಡೆಸಿಕೊಂಡು ಹೋಗುವಂತೆ ಜಿಲ್ಲಾ ಅಲ್ಪಸಂಖ್ಯಾತ ಪ್ರಧಾನ ಕಾರ್ಯದರ್ಶಿ ಹಾರೂನ್ ರಶೀದ್ ಜಿಲ್ಲೆಯ ನಾಯಕರಲ್ಲಿ ಮನವಿ ಮಾಡಿದರು. 

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಮುಹಮ್ಮದ್ ಕುಂಞಿ, ಯುವ ಜಿಲ್ಲಾ ಅಧ್ಯಕ್ಷ ಅಕ್ಷಿತ್ ಸುವರ್ಣ, ಮಹಿಳಾ ಜಿಲ್ಲಾಧ್ಯಕ್ಷ ಸುಮತಿ ಹೆಗಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರವೀರ್ಣ ಚಂದ್ರ ಜೈನ್, ಹಿರಿಯ ಮುಖಂಡರಾದ ಪಿ.ಎ.ರಹೀಂ, ಮುಹಮ್ಮದ್ ಸುವಾಝ್, ರಫೀಕ್ ಕೊಚ್ಚಿ, ಮುಹಮ್ಮದ್ ಶಫಿಕ್, ಸುಲೈಮಾನ್ ಅಕ್ಕರಂಗಡಿ, ಹರೀಶ್ ಕೊಟ್ಟಾರಿ, ಇಸಾಕ್ ಕಲ್ಲಡ್ಕ, ಮಹಿಳಾ ಮುಖಂಡರಾದ ಕುಶಲ ಶೆಟ್ಟಿ, ಕೈರುನ್ನಿಸಾ ಉಪಸ್ಥಿತರಿದ್ದರು.

ಜಿಲ್ಲಾ ಅಲ್ಪಸಂಖ್ಯಾತ ಪ್ರಧಾನ ಕಾರ್ಯದರ್ಶಿ ಹಾರೂನ್ ರಶೀದ್ ಸ್ವಾಗತಿಸಿದರು. ಅಮಾನುಲ್ಲಾ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News