ಮಾ.18: ಟೆಕ್ಕಿಗಳ ಜೊತೆ ರಾಹುಲ್‌ ಗಾಂಧಿ ಸಂವಾದ

Update: 2019-03-16 17:19 GMT

ಬೆಂಗಳೂರು, ಮಾ.16: ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಮಾ.18ರಂದು ನಗರದ ಮಾನ್ಯತಾ ಟೆಕ್‌ಪಾರ್ಕ್‌ನ ಬಯಲು ರಂಗಮಂದಿರದಲ್ಲಿ ಸಾಫ್ಟ್‌ವೇರ್ ಎಂಜಿನಿಯರ್‌ಗಳು ಸೇರಿದಂತೆ ವಿವಿಧ ಕ್ಷೇತ್ರಗಳ ತಜ್ಞರ ಜೊತೆ ಸಂವಾದ ನಡೆಸಲಿದ್ದಾರೆ.

ಮಾ.18ರಂದು ಬೆಳಗ್ಗೆ 11ಕ್ಕೆ ಕಲಬುರಗಿಗೆ ಆಗಮಿಸಲಿರುವ ರಾಹುಲ್‌ ಗಾಂಧಿ ಬಹಿರಂಗ ಸಮಾವೇಶದಲ್ಲಿ ಮಾತನಾಡಲಿದ್ದಾರೆ. ಹಾಗೂ ಹೈ-ಕರ್ನಾಟಕ ಭಾಗದ ಬಿಜೆಪಿ ಮುಖಂಡರನ್ನು ಕಾಂಗ್ರೆಸ್‌ಗೆ ಬರಮಾಡಿಕೊಳ್ಳಲಿದ್ದಾರೆ. ನಂತರ ಸಂಜೆ 5ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಐಟಿ-ಬಿಟಿ ರಾಜಧಾನಿ ಎಂದೇ ಖ್ಯಾತಿ ಪಡೆದಿರುವ ಬೆಂಗಳೂರಿನಲ್ಲಿ ಐಟಿ ಉದ್ಯೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಕ್ರಿಯರಾಗಿರುತ್ತಾರೆ. ಹೀಗಾಗಿ ಈ ಸಮುದಾಯವನ್ನು ಸೆಳೆಯುವ ನಿಟ್ಟಿನಲ್ಲಿ ರಾಹುಲ್‌ ಗಾಂಧಿ ಹೆಚ್ಚು ಆಸಕ್ತಿ ವಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News