ಇಂದಿರಾ ಕ್ಯಾಂಟೀನ್ ನಲ್ಲಿ ಕಳಪೆ ಆಹಾರ ಆರೋಪ: ತನಿಖೆಗೆ ಸೂಚನೆ

Update: 2019-03-18 08:11 GMT

ಬೆಂಗಳೂರು: ಇಂದಿರಾ ಕ್ಯಾಂಟೀನ್‌ನಲ್ಲಿ ಕಳಪೆ ಊಟ ಎಂಬ ಮಾಧ್ಯಮ ವರದಿ ಬಳಿಕ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ಸಂಬಂಧ ತನಿಖೆ ನಡೆಸಲಾಗುವುದು ಎಂದು ನಗರಾಭಿವೃದ್ಧಿ‌ ಸಚಿವ ಡಾ.ಜಿ. ಪರಮೇಶ್ವರ ಅವರು ತಿಳಿಸಿದರು.

ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಾನು ಎರಡು‌ ಮೂರು ಬಾರಿ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ ಮಾಡಿದ್ದೇನೆ.‌ ರುಚಿ ಹಾಗೂ ಶುಚಿ ಕಾಪಾಡಿಕೊಳ್ಳಲು ಸೂಚಿಸಿದ್ದೆ. ಇಂದಿರಾ ಕ್ಯಾಂಟೀನ್‌ ಆಹಾರ ಗುಣಮಟ್ಟದ ಕುರಿತು ಮಾಧ್ಯಮ ವರದಿ ಬಳಿಕ ಈ ಬಗ್ಗೆ ತನಿಖೆ ನಡೆಸಲು ಆಯುಕ್ತರಿಗೆ ಸೂಚಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ 198 ವಾರ್ಡ್‌ನ ಎಲ್ಲ ಕ್ಯಾಂಟೀನ್‌ಗಳಲ್ಲೂ ಆಹಾರದ ಗುಣಮಟ್ಟ ಪರೀಕ್ಷಿಸುವಂತೆಯೂ ನಿರ್ದೇಶನ ನೀಡಿದ್ದೇನೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News