ಎಚ್.ವಿಶ್ವನಾಥ್ ಆರೋಗ್ಯ ವಿಚಾರಿಸಿದ ಮಾಜಿ ಪ್ರಧಾನಿ ದೇವೇಗೌಡ

Update: 2019-03-18 14:27 GMT
ಎಚ್.ವಿಶ್ವನಾಥ್

ಬೆಂಗಳೂರು, ಮಾ. 18: ಲಘು ಹೃದಯಾಘಾತದ ಹಿನ್ನೆಲೆಯಲ್ಲಿ ಇಲ್ಲಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಾಗಿರುವ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಹಾಲಿ ಶಾಸಕ ಎಚ್.ವಿಶ್ವನಾಥ್ ಅವರ ಆರೋಗ್ಯವನ್ನು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ವಿಚಾರಿಸಿದರು.

ಸೋಮವಾರ ಇಲ್ಲಿನ ಬನ್ನೇರುಘಟ್ಟ ರಸ್ತೆಯಲ್ಲಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಭೇಟಿ ನೀಡಿದ ದೇವೇಗೌಡ, ಎಚ್.ವಿಶ್ವನಾಥ್ ಅವರಿಗೆ ಶೀಘ್ರ ಗುಣಮುಖರಾಗಿ ಎಂದು ಹಾರೈಸಿದರು. ಅಲ್ಲದೆ, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಕುರಿತು ಸಮಾಲೋಚನೆ ನಡೆಸಿದ್ದಾರೆಂದು ಗೊತ್ತಾಗಿದೆ.

ಇತ್ತೀಚೆಗೆ ಹೈದರಾಬಾದ್‌ದಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಅಲ್ಲಿಗೆ ತೆರಳಿದ್ದ ವೇಳೆ ಲಘು ಹೃದಯಾಘಾತ ಉಂಟಾಗಿತ್ತು. ಅಲ್ಲಿನ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬೆಂಗಳೂರಿಗೆ ಮರಳಿದ್ದು, ಇಲ್ಲಿನ ಜಯದೇವ ಹೃದ್ರೋಗ ಆಸ್ಪತ್ರಗೆ ದಾಖಲಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News