ಮಂಡ್ಯದಲ್ಲಿ ಗೆಲ್ಲುವ ಭರವಸೆ ಇದೆ: ನಿಖಿಲ್ ಕುಮಾರಸ್ವಾಮಿ

Update: 2019-03-18 17:30 GMT

ಶೃಂಗೇರಿ,ಮಾ.18: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 28 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಗಳ ಪರವಾಗಿ ಪೂಜೆ ಸಲ್ಲಿಸಿದ್ದೇನೆಂದು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಸೋಮವಾರ ಶೃಂಗೇರಿಯಲ್ಲಿ ಸುದ್ದಿಗಾರದೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಲು ಪಕ್ಷದ ಬಿ ಫಾರಂ ಸಿಕ್ಕಿದೆ. ಇದನ್ನು ಮಠದ ಜಗದ್ಗುರು ಹಾಗೂ ಶಾರದಾಂಬೆ ಮುಂದೆ ಇಟ್ಟು ಆಶೀರ್ವಾದ ಪಡೆದಿದ್ದೇವೆ ಎಂದರು.

ಸುಮಲತಾ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಲು ತೀರ್ಮಾನಿಸಿದ್ದಾರೆ. ಅವರಿಗೆ ಒಳ್ಳೆಯದಾಗಲಿ. ತಂದೆ ಕುಮಾರಸ್ವಾಮಿ ಹಾಗೂ ಮಂಡ್ಯದ ಜನತೆಯ ನಡುವೆ ನಂಟು ಹೇಗಿದೆ ಎಂಬುದು ಅಲ್ಲಿನ ವಾತಾವರಣದಿಂದ ಗೊತ್ತಾಗಿದೆ. ಕುಮಾರಣ್ಣ ಏನೆಂದು ಮಂಡ್ಯದ ಮತದಾರರಿಗೆ ತಿಳಿದಿದೆ. ಅಲ್ಲಿನ ಜನರು ನಮ್ಮ ಕುಟುಂಬದ ಬಗ್ಗೆ ಪ್ರೀತಿ ವಿಶ್ವಾಸವಿರಿಸಿದ್ದಾರೆ. ಅದನ್ನು ಪ್ರಾಮಾಣಿಕವಾಗಿ ಮುಂದುವರಿಸುವ ಗುರುತರ ಜವಾಬ್ದಾರಿ ನನ್ನ ಮೇಲಿದೆ. ಜನರು ನನ್ನನ್ನು ಗೆಲ್ಲಿಸುತ್ತಾರೆಂಬ ವಿಶ್ವಾಸವಿದೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News