ಮಾಜಿ ಸಚಿವ ರೇಣುಕಾಚಾರ್ಯ ವಿರುದ್ಧ ಜಾಮೀನು ರಹಿತ ವಾರೆಂಟ್

Update: 2019-03-18 17:48 GMT

ಬೆಂಗಳೂರು, ಮಾ.18: ಚುನಾವಣೆ ಮಾದರಿ ನೀತಿ ಸಂಹಿಂತೆ ಉಲ್ಲಂಘನೆ ಆರೋಪ ಸಂಬಂಧ ವಿಚಾರಣೆಗೆ ಹಲವು ಬಾರಿ ಗೈರು ಹಾಜರಿ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಾಜಿ ಸಚಿವ ರೇಣುಕಾಚಾರ್ಯ ವಿರುದ್ಧ ಜಾಮೀನು ರಹಿತ ವಾರೆಂಟ್ ಆದೇಶ ಹೊರಡಿಸಿದೆ.

ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಆರೋಪ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೀಗಾಗಿ ಸೋಮವಾರ ಕೋರ್ಟ್ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದರೂ ಮಾಜಿ ಸಚಿವ ರೇಣುಕಾಚಾರ್ಯ ಗೈರು ಹಾಜರಾಗಿದ್ದು, ಈ ಹಿನ್ನೆಲೆಯಲ್ಲಿ ನ್ಯಾ. ರಾಮಚಂದ್ರ ಡಿ. ಹುದ್ದರ್ ಎರಡನೇ ಬಾರಿ ಜಾಮೀನು ರಹಿತ ವಾರೆಂಟ್ ಆದೇಶ ಹೊರಡಿಸಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News