ಎ.10ರಂದು ಬಿಎಸ್ಪಿ ನಾಯಕಿ ಮಾಯಾವತಿ ಮೈಸೂರಿಗೆ ಆಗಮನ

Update: 2019-03-18 18:45 GMT

ಮೈಸೂರು,ಮಾ.18: ಮುಂಬರುವ ಎಪ್ರಿಲ್ 10 ರಂದು ಮೈಸೂರಿಗೆ ಬಿಎಸ್ಪಿ ನಾಯಕಿ ಮಾಯಾವತಿ ಆಗಮಿಸಲಿದ್ದಾರೆಂದು ಶಾಸಕ ಎನ್ ಮಹೇಶ್ ತಿಳಿಸಿದರು.

ನಗರದಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ನಾವು 28 ಕ್ಷೇತ್ರಗಳಲ್ಲೂ ಸ್ವತಂತ್ರವಾಗಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುತ್ತೇವೆ. ಎಲ್ಲ ಕ್ಷೇತ್ರದಲ್ಲೂ ಗೆಲ್ಲುವ ಭರವಸೆ ಹೊಂದಿದ್ದೇವೆ ಎಂದು ತಿಳಿಸಿದರು. 

ಅಭ್ಯರ್ಥಿಗಳ ಪಟ್ಟಿಯನ್ನು ಇನ್ನೆರಡು ದಿನಗಳಲ್ಲಿ ಫೈನಲ್ ಮಾಡುತ್ತೇವೆ. ಅಲ್ಲದೇ ಈ ಬಾರಿ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಬಿಎಸ್ಪಿ ಸಮರ್ಥ ಅಭ್ಯರ್ಥಿ ಕಣಕ್ಕೆ ಇಳಿಸುವುದರ ಜೊತೆಗೆ ಗೆಲುವನ್ನು ಸಾಧಿಸುತ್ತೇವೆ ಎಂದರು. ಹಿರಿಯ ರಾಜಕಾರಣಿ ಮಾಜಿ ಕೇಂದ್ರ ಸಚಿವರಾದ ವಿ.ಶ್ರೀನಿವಾಸಪ್ರಸಾದ್ ಅವರು ಸ್ಪರ್ಧೆ ಮಾಡಿದರೂ ಭಯ ಇಲ್ಲ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News