ವಿಜಯಪುರ: ಕೆ.ಆರ್.ಐ.ಡಿ.ಎಲ್. ಇಂಜಿನಿಯರ್ ಮನೆಗೆ ಎಸಿಬಿ ದಾಳಿ

Update: 2019-03-19 05:47 GMT

ವಿಜಯಪುರ, ಮಾ.19: ಇಲ್ಲಿನ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ದಿ ನಿಗಮ(ಕೆ.ಆರ್.ಐ.ಡಿ.ಎಲ್.)ದಲ್ಲಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಶರದ್ ಇಜೇರಿ ಮನೆ ಮೇಲೆ ಇಂದು ಬೆಳ್ಳಂಬೆಳಗ್ಗೆ ಎಸಿಬಿ ದಾಳಿ‌ ನಡೆದಿದೆ.

ಐದು ವಾಹನಗಳಲ್ಲಿ ಬಾಗಲಕೋಟೆ ಎಸಿಬಿ ಸಿಪಿಐ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಇಜೇರಿ ವಿರುದ್ಧ ಅಕ್ರಮ ಆಸ್ತಿ ಗಳಿಕೆ ವಿಚಾರವಾಗಿ ಎಸಿಬಿಗೆ ದೂರು ಸಲ್ಲಿಕೆಯಾಗಿತ್ತು. ಈ ಹಿನ್ನಲೆಯಲ್ಲಿ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು, ನಗರದ ಚಾಲುಕ್ಯ ನಗರದಲ್ಲಿರುವ ಶರದ್ ಇಜೇರಿ ನಿವಾಸದ ಮೇಲೆ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆಯಲ್ಲಿ ಎಸಿಬಿ ಅಧಿಕಾರಿಗಳು ತೊಡಗಿದ್ದಾರೆ.‌

ಶರದ್ ಇಜೇರಿ ವಿಜಯಪುರದಲ್ಲಿ 5 ಮನೆಗಳಿರುವ ಅಪಾರ್ಟ್ ಮೆಂಟ್ ಹಾಗೂ ಇತರ ಆಸ್ತಿ ಗಳಿಸಿರುವ ಆರೋಪ ಎದುರಿಸುತ್ತಿದ್ದಾರೆ.

ಶರದ್ ಇಜೇರಿ ಮನೆಯಲ್ಲಿ ಬೀಡು ಬಿಟ್ಟಿರುವ ಎಸಿಬಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಬ್ಯಾಂಕ್ ಪಾಸ್‌ ಬುಕ್, ಜಮೀನು ಖರೀದಿ ಪತ್ರ ಸೇರಿದಂತೆ ಹಲವು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News