ನಿರ್ಮಾಣ ಹಂತದ ಕಟ್ಟಡ ಕುಸಿತ: ಅವಶೇಷಗಳಡಿ ಹಲವು ಕಾರ್ಮಿಕರು ಸಿಲುಕಿರುವ ಶಂಕೆ

Update: 2019-03-19 15:07 GMT
ಫೋಟೊ ಕೃಪೆ: twitter.com/SahuSuneel

ಧಾರವಾಡ, ಮಾ.19: ನಿರ್ಮಾಣ ಹಂತದಲ್ಲಿದ್ದ ಬಹು ಮಹಡಿ ಕಟ್ಟಡವೊಂದು ಕುಸಿದು ಬಿದ್ದ ಘಟನೆ ಧಾರವಾಡದ ಕುಮಾರೇಶ್ವರ ನಗರದಲ್ಲಿ ನಡೆದಿದ್ದು, ಹಲವು ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದಾರೆಂದು ಶಂಕಿಸಲಾಗಿದೆ.

4 ಮಹಡಿಗಳ ಈ ಕಟ್ಟಡದಲ್ಲಿ ಸುಮಾರು 60-70 ಅಂಗಡಿಗಳಿತ್ತು. ಕಾರ್ಮಿಕರು ಕೆಲಸ ಮಾಡುತ್ತಿದ್ದಂತೆ ಕಟ್ಟಡ ಕುಸಿದಿದೆ ಎನ್ನಲಾಗಿದೆ. ಈಗಾಗಲೇ 10 ಮಂದಿಯನ್ನು ಸಾರ್ವಜನಿಕರು ರಕ್ಷಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳ ದೌಡಾಯಿಸಿದ್ದು, ಜಿಲ್ಲಾಧಿಕಾರಿ ದೀಪಾ ಚೋಳನ್ ಸ್ಥಳದಲ್ಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News