ಧಾರವಾಡದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: ಸಿಎಂ ಕುಮಾರಸ್ವಾಮಿ ದಿಗ್ಭ್ರಮೆ

Update: 2019-03-19 13:08 GMT

ಬೆಂಗಳೂರು, ಮಾ.19: ಧಾರವಾಡದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡ ಕುಸಿದು ಕಾರ್ಮಿಕರು ಸಾವನ್ನಪ್ಪಿದ ಬಗ್ಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

ಅವರು ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಮುಖ್ಯ ಕಾರ್ಯದರ್ಶಿಗಳೊಂದಿಗೆ ಮಾತನಾಡಿ ರಕ್ಷಣಾ ಕಾರ್ಯಾಚರಣೆ ಕುರಿತು ಚರ್ಚಿಸಿದರು. ಬೆಂಗಳೂರಿನಿಂದ ವಿಶೇಷ ತಂಡವೊಂದನ್ನು ಇಂದು ಸಂಜೆ ವಿಶೇಷ ವಿಮಾನದಲ್ಲಿ ಕಳುಹಿಸುವಂತೆ ಸೂಚನೆ ನೀಡಿದರು.

ಅಲ್ಲದೆ ಸುತ್ತಮುತ್ತಲಿನ ಆರೋಗ್ಯ ಕೇಂದ್ರ ಆಸ್ಪತ್ರೆಗಳ ವೈದ್ಯಕಿಯ ತಂಡಗಳನ್ನು ನಿಯೋಜಿಸಿ, ಗಾಯಾಳುಗಳಿಗೆ ಕೂಡಲೇ ಚಿಕಿತ್ಸೆ ಒದಗಿಸಲು ಕ್ರಮ ವಹಿಸುವಂತೆ ಸೂಚನೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News