ಬಂಟಕಲ್ ಇಂಜಿನಿಯರ್ ವಿದ್ಯಾರ್ಥಿಗಳ ಹೊಡೆದಾಟ

Update: 2019-03-19 16:06 GMT

ಶಿರ್ವ, ಮಾ.19: ವಾಟ್ಸಾಪ್ ಸ್ಟೇಟಸ್ ವಿಚಾರಕ್ಕೆ ಸಂಬಂಧಿಸಿ ಬಂಟಕಲ್ ಶ್ರೀಮಧ್ವವಾದಿರಾಜ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಪರಸ್ಪರ ಹೊಡೆದಾಡಿಕೊಂಡ ಘಟನೆ ಇಂದು ಕಾಲೇಜಿನ ಹೊರಗೆ ನಡೆದಿದೆ.

ಅಪಘಾತಕ್ಕೀಡಾದ ವಿದ್ಯಾರ್ಥಿಯೊಬ್ಬನ ಫೋಟೋವನ್ನು ವಾಟ್ಸಾಪ್ ಸ್ಟೇಟಸ್‌ನಲ್ಲಿ ಹಾಕಿದ ವಿಚಾರವಾಗಿ ಎರಡು ತಂಡಗಳ ಮಧ್ಯೆ ವಾಗ್ವಾದ ನಡೆದಿತ್ತೆನ್ನಲಾಗಿದೆ. ಈ ಸಂಬಂಧ ಕಾಲೇಜಿನ ಆವರಣದ ಹೊರಗೆ ನಾಲ್ಕೈದು ವಿದ್ಯಾರ್ಥಿಗಳು ಸಾರ್ವಜನಿಕರ ಎದುರೇ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಮಾಹಿತಿ ತಿಳಿದ ಶಿರ್ವ ಪೊಲೀಸರು ಸ್ಥಳಕ್ಕೆ ಆಗಮಿಸುವ ವೇಳೆ ವಿದ್ಯಾರ್ಥಿ ಗಳು ಪರಾರಿಯಾಗಿದ್ದಾರೆ. ಬಳಿಕ ಪೊಲೀಸರು ಕಾಲೇಜಿನ ಪ್ರಾಂಶುಪಾಲ ರೊಂದಿಗೆ ಮಾತುಕತೆ ನಡೆಸಿ ಗಲಾಟೆ ನಡೆಸಿದ ವಿದ್ಯಾರ್ಥಿಗಳ ಮಾಹಿತಿ ನೀಡುವಂತೆ ತಿಳಿಸಿದ್ದರೆನ್ನಲಾಗಿದೆ.

ಈ ಬಗ್ಗೆ ಯಾವುದೇ ಪ್ರಕರಣ ದಾಖಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News