ಸಿನಿಮಾ ನಟರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು
Update: 2019-03-19 17:18 GMT
ಬೆಂಗಳೂರು, ಮಾ.19: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಪರ ಸಿನಿಮಾ ನಟರು ಬಹಿರಂಗವಾಗಿ ಮತ ಯಾಚಿಸುತ್ತಿದ್ದಾರೆಂದು ಆರೋಪಿಸಿ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ದೂರು ನೀಡಿದೆ.
ಮಂಗಳವಾರ ಶೇಷಾದ್ರಿ ರಸ್ತೆಯಲ್ಲಿರುವ ರಾಜ್ಯ ಚುನಾವಣಾ ಆಯೋಗಕ್ಕೆ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಜಯರಾಮ್ ನಾಯ್ಡು ನೀಡಿದ್ದು, ಬೆಂಬಲ ನೀಡುವ ಸಿನಿಮಾ ನಟರ ಸಿನಿಮಾಗಳನ್ನು ರದ್ದು ಮಾಡುವಂತೆ ಕೋರಿದ್ದಾರೆ.
ಯಾವುದೇ ನಟ ಅಥವಾ ಪ್ರಚಾರಕ ಚುನಾವಣೆಯ ಪ್ರಚಾರದಲ್ಲಿ ಭಾಗಿಯಾದರೆ, ಅವರೆಲ್ಲರೂ ಚುನಾವಣಾ ನೀತಿ ಸಂಹಿತೆ ಅಡಿಯಲ್ಲಿ ಬರುತ್ತಾರೆ. ಹೀಗಾಗಿ, ಚುನಾವಣೆ ಮುಗಿಯುವವರೆಗೂ ಪ್ರಚಾರದಲ್ಲಿ ಪಾಲ್ಗೊಳ್ಳುವ ನಟರ ಸಿನಿಮಾಗಳನ್ನು ನಿಷೇಧಿಸಬೇಕು ಎಂದರು.