ಮೈಸೂರು-ಕೊಡಗು ಲೋಕಸಭೆ ಕ್ಷೇತ್ರ: ಇಬ್ಬರು ಪಕ್ಷೇತರರಿಂದ ನಾಮಪತ್ರ ಸಲ್ಲಿಕೆ

Update: 2019-03-20 15:23 GMT

ಮೈಸೂರು,ಮಾ.20: ಪ್ರತಿಷ್ಠಿತ ಮೈಸೂರು ಕೊಡಗು ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಪಿ.ಎಸ್. ಯಡಿಯೂರಪ್ಪನವರು ಇಂದು ಬೆಳಿಗ್ಗೆ ಜಿಲ್ಲಾ ಚುನಾವಣಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರಿಗೆ ನಾಮಪತ್ರ ಸಲ್ಲಿಸಿದರು.

ಇವರು ಪಿರಿಯಾಪಟ್ಟಣದ ನಿವಾಸಿಯಾಗಿದ್ದು, ನಿವೃತ್ತ ಸರ್ಕಾರಿ ನೌಕರರಾಗಿದ್ದಾರೆ. 

ಇದೇ ವೇಳೆ ಪಕ್ಷೇತರ ಅಭ್ಯರ್ಥಿಯಾಗಿ ಶ್ರೀನಿವಾಸಯ್ಯ ಎಂಬವರು ಕೂಡ ಜಿಲ್ಲಾ ಚುನಾವಣಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರಿಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಯ ಎರಡನೇ ದಿನವಾದ ಇಂದು ಎರಡು ನಾಮಪತ್ರಗಳು ಸಲ್ಲಿಕೆಯಾಗಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News