ಶಾಸಕ ಆನಂದ್‌ ಸಿಂಗ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ

Update: 2019-03-20 16:03 GMT

ಬೆಂಗಳೂರು, ಮಾ.20: ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಶಾಸಕ ಅನಂದ್ ಸಿಂಗ್‌ಗೆ ಜಾಮೀನು ರಹಿತ ಬಂಧನ ವಾರಂಟ್ ಆದೇಶ ಹೊರಡಿಸಿದೆ.

ವೆಂಕಟೇಶ್ವರ ಟ್ರಾನ್ಸ್‌ಪೋರ್ಟ್ ಕಂಪೆನಿಯಿಂದ 50 ಸಾವಿರ ಮೆಟ್ರಿಕ್‌ಟನ್ ಅದಿರು ಸಾಗಾಣಿಕೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶದ ಮೇಲೆ ಸಿಬಿಐ ತಂಡ ತನಿಖೆ ನಡೆಸಿ ಚಾರ್ಜ್ ಶೀಟ್‌ನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಈ ಹಿನ್ನೆಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಆನಂದ್ ಸಿಂಗ್‌ಗೆ ಸೂಚನೆ ನೀಡಲಾಗಿತ್ತು.

ಆದರೆ ಬುಧವಾರ ಕೂಡ ಆನಂದ್ ಸಿಂಗ್ ಅವರು ಕೋರ್ಟ್‌ಗೆ ಹಾಜರಾಗದ ಕಾರಣ ನ್ಯಾಯಾಧೀಶರು ಬಂಧನ ವಾರಂಟ್ ಹೊರಡಿಸಿದ್ದಾರೆ. ಈ ಹಿಂದೆ ಕೂಡ ಆನಂದ್ ಸಿಂಗ್ ಅವರು ಹಾಜರಾಗಿರಲಿಲ್ಲ. ರೆಸಾರ್ಟ್ ಗಲಾಟೆಯಲ್ಲಿ ಹಲ್ಲೆಗೊಳಗಾಗಿದ್ದ ಶಾಸಕರು ಇನ್ನು ಚೇತರಿಸಿಕೊಂಡಿಲ್ಲ ಎಂದು ಅವರ ಪರ ವಕೀಲರು ಕೋರ್ಟ್‌ಗೆ ಕಾರಣ ಕೊಟ್ಟಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News