ದೇವೇಗೌಡ ಎಲ್ಲಿ ಬೇಕಾದರೂ ಸ್ಪರ್ಧಿಸಬಹುದು: ಸಚಿವ ಝಮೀರ್ ಅಹ್ಮದ್

Update: 2019-03-20 16:09 GMT

ಬೆಂಗಳೂರು, ಮಾ. 20: ಜೆಡಿಎಸ್‌ಗೆ ಹಂಚಿಕೆಯಾಗಿರುವ ಎಂಟು ಕ್ಷೇತ್ರಗಳ ಪೈಕಿ ಮಾಜಿ ಪ್ರಧಾನಿ ದೇವೇಗೌಡ ಅವರು ಎಲ್ಲಿ ಬೇಕಾದರೂ ನಿಲ್ಲಲು ಸ್ವತಂತ್ರರು. ಹಾಸನ, ತುಮಕೂರು ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಆಹ್ವಾನ ನೀಡಲಾಗುತ್ತಿದೆ ಎಂದು ಆಹಾರ ಸಚಿವ ಬಿ.ಝಡ್.ಝಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.

ಬುಧವಾರ ಇಲ್ಲಿನ ಪದ್ಮನಾಭ ನಗರದಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡ ಅವರನ್ನು ಬೇಟಿ ಮಾಡಿ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಕುರಿತು ಸಮಾಲೋಚನೆ ನಡೆಸಿದ ಬಳಿಕ ಮಾತನಾಡಿದ ಅವರು, ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸುವಂತೆ ಮನವಿ ಮಾಡಿದ್ದು, ಅವರು ಸ್ಪರ್ಧಿಸಿದರೆ ಗೆಲ್ಲಿಸುವುದು ನಮ್ಮ ಹೊಣೆ ಎಂದರು.

ಮಂಡ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅವರಿಗೆ ಬೆಂಬಲ ನೀಡಿಲ್ಲ. ಕೆಲವರು ನಾಮಪತ್ರ ಸಲ್ಲಿಸುವ ವೇಳೆ ಅವರೊಂದಿಗೆ ಹೋಗಿರಬಹುದು. ಅಂಬರೀಶ್ ಅಭಿಮಾನದಿಂದ ಹೋಗಿರಬಹುದಷ್ಟೇ ಎಂದು ಅವರು ಸ್ಪಷ್ಟನೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News