ಹಾಸನ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಚಿವ ಎ.ಮಂಜು

Update: 2019-03-20 17:57 GMT

ಹಾಸನ,ಮಾ.20: ಲೋಕಸಭೆ ಚುನಾವಣೆಯಲ್ಲಿ ಹಾಸನ ಜಿಲ್ಲೆಯಲ್ಲಿ ಈ ಬಾರಿ ಬಿಜೆಪಿ ಪಕ್ಷದ ಗೆಲುವು ನಿಶ್ಚಿತ ಎಂದು ಮಾಜಿ ಸಚಿವ ಎ. ಮಂಜು ಭರವಸೆ ವ್ಯಕ್ತಪಡಿಸಿದರು.

ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಪಕ್ಷದ ಜಿಲ್ಲಾ ಮಹಿಳಾ ಮೋರ್ಚಾ ಪ್ರಮುಖರ ಜೊತೆ ಮಾತನಾಡಿ, ಜಿಲ್ಲೆಯ ಜನತೆ ಕುಟುಂಬ ರಾಜಕಾರಣದ ಬಗ್ಗೆ ಬೇಸತ್ತಿದ್ದು, ಒಂದು ಬದಲಾವಣೆ ಬಯಸಿದ್ದಾರೆ. ಈ ಬಾರಿ ಜಿಲ್ಲೆಯಲ್ಲಿ ಬಿಜೆಪಿ ಗೆಲ್ಲುವುದು ನಿಶ್ಚಿತ ಎಂದು ಹೇಳಿದರು.

ನನ್ನನ್ನು ನಿಮ್ಮ ಸಹೋದರ ಎಂದು ತಿಳಿದು ಆಶೀರ್ವದಿಸಿ. ಮೊದಲು ಬಿಜೆಪಿಯಿಂದಲೇ ನಾನು ಶಾಸಕನಾಗಿದ್ದೆ. ಈಗ ಮತ್ತೆ ಮರಳಿ ಗೂಡಿಗೆ ಬಂದಿದ್ದೇನೆ. ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ಹೇಳಿದರು. 

ಕ್ಷೇತ್ರದ ಶಾಸಕ ಪ್ರೀತಮ್ ಜೆ. ಗೌಡ ಮಾತನಾಡಿ, ಲೋಕಸಭೆ ಚುನಾವಣೆಯಲ್ಲಿ ಎ.ಮಂಜು ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸುವ ಮೂಲಕ ಜಿಲ್ಲೆಯನ್ನು ಅಭಿವೃದ್ಧಿಗೊಳಿಸೋಣ ಎಂದು ಕರೆ ನೀಡಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News