​ಎಸೆಸೆಲ್ಸಿ ಪರೀಕ್ಷೆ: ದ.ಕ. ಜಿಲ್ಲೆಯಲ್ಲಿ 392 ವಿದ್ಯಾರ್ಥಿಗಳು ಗೈರು

Update: 2019-03-21 08:17 GMT

ಮಂಗಳೂರು, ಮಾ.21: ಎಸೆಸೆಲ್ಸಿ ಪರೀಕ್ಷೆ ಆರಂಭಗೊಂಡಿದ್ದು, ಇಂದು ನಡೆದ ಮೊದಲ ಪರೀಕ್ಷೆಯಲ್ಲಿ ದ.ಕ. ಜಿಲ್ಲೆಯಿಂದ ಹೆಸರು ನೋಂದಾಯಿಸಿಕೊಂಡಿದ್ದವರ ಪೈಕಿ 392 ಮಂದಿ ಗೈರು ಹಾಜರಾಗಿದ್ದರು.

ಇಂದು ನಡೆದ ಕನ್ನಡ ಮತ್ತು ಇಂಗ್ಲಿಷ್ ಭಾಷಾ ಪರೀಕ್ಷೆಗೆ ದ.ಕ. ಜಿಲ್ಲೆಯಲ್ಲಿ 29,097 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು. ಈ ಪೈಕಿ 28,705 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಒಟ್ಟು 392 ಮಂದಿ ಗೈರು ಹಾಜರಾಗಿದ್ದರು.

ದ.ಕ. ಜಿಲ್ಲೆಯ 95 ಕೇಂದ್ರಗಳಲ್ಲಿ ಇಂದು ಪರೀಕ್ಷೆ ನಡೆದಿದ್ದು, ಯಾವುದೇ ಅಕ್ರಮಗಳು ನಡೆದಿರುವ ಬಗ್ಗೆ ವರದಿಯಾಗಿಲ್ಲ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News