ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ : ಪ್ರಮೋದ್ ಮಧ್ವರಾಜ್ ಜೆಡಿಎಸ್ನಿಂದ ಸ್ಪರ್ಧೆ
ಉಡುಪಿ, ಮಾ. 21: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಲಿದ್ದಾರೆ.
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಜೆಡಿಎಸ್-ಕಾಂಗ್ರೆಸ್ ಪಕ್ಷಗಳ ನಡುವೆ ಲೋಕಸಭಾ ಚುನಾವಣೆಗೆ ನಡೆದ ಒಪ್ಪಂದದಂತೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರ ಜೆಡಿಎಸ್ ಪಾಲಾಗಿದ್ದು, ಆ ಪಕ್ಷದಿಂದ ಸಮರ್ಥ ಅಭ್ಯರ್ಥಿಯ ಕೊರತೆಯ ಹಿನ್ನೆಲೆಯಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಪ್ರಮೋದ್ ಮಧ್ವರಾಜ್ ಜೆಡಿಎಸ್ನಿಂದ ಸ್ಪರ್ಧಿಸಲಿದ್ದಾರೆ ಎಂದು ಜೆಡಿಎಸ್ ಹಿರಿಯ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಬೋಜೇಗೌಡ ತಿಳಿಸಿದ್ದಾರೆ.
ಪ್ರಮೋದ್ ಮಧ್ವರಾಜ್ ಅವರು ಜೆಡಿಎಸ್ ಬಿಫಾರ್ಮ್ನೊಂದಿಗೆ ಜೆಡಿಎಸ್ ಚಿಹ್ನೆಯಲ್ಲಿ ಸ್ಪರ್ಧಿಸಲಿದ್ದಾರೆ.
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರು ಪ್ರಮೋದ್ಗೆ ಪಕ್ಷದ ಬಿಫಾರ್ಮ್ನ್ನು ನೀಡಿದ್ದಾರೆ ಎಂದು ಹೇಳಿದ್ದಾರೆ. ಪ್ರಮೋದ್, ಕಾಂಗ್ರೆಸ್ ಪಕ್ಷದಲ್ಲೇ ಮುಂದುವರಿಯುವರೇ ಎಂಬ ಪ್ರಶ್ನೆಗೆ ಅವರು ಉತ್ತರಿಸಲಿಲ್ಲ.