ಮಾ.22 ರಂದು ಪ್ರಕಾಶ್ ರೈ ನಾಮಪತ್ರ ಸಲ್ಲಿಕೆ

Update: 2019-03-21 13:17 GMT

ಬೆಂಗಳೂರು, ಮಾ.21: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾಗಿರುವ, ಚಿಂತಕ ಬಹುಭಾಷ ನಟ ಪ್ರಕಾಶ್ ರಾಜ್ ಅವರು, ಮಾ.22 ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. 

ಶಾಂತಿನಗರದ ಆಸ್ಟಿನ್ ಟೌನ್ ಬಳಿಯ ಮೈದಾನದಿಂದ ಹಡ್ಸನ್ ವೃತ್ತದವರೆಗೂ ಇಂದು ಬೆಂಬಲಿಗರು ಹಾಗೂ ಅಭಿಮಾನಿಗಳೊಂದಿಗೆ ಮೆರವಣಿಗೆ ನಡೆಸಲಿದ್ದಾರೆ. ಬಳಿಕ ಅಲ್ಲಿನ ಬಿಬಿಎಂಪಿ ಪ್ರಧಾನ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News