ಉಡುಪಿ: ಕೊಳೆತ ಮೃತದೇಹ ಪತ್ತೆ

Update: 2019-03-21 17:15 GMT

ಉಡುಪಿ, ಮಾ.21: ಉಡುಪಿ ಕರಾವಳಿ ಬೈಪಾಸ್ ಬಳಿಯ ಕರಾವಳಿ ಹೋಟೆಲ್ ಎದುರಿನ ಪಜಿರ್ ಲಚ್ಚಿಲ್ ರಸ್ತೆಯ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ವ್ಯಕ್ತಿಯೊಬ್ಬರ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮೃತರನ್ನು ಶಿವಕುಮಾರ್ (45) ಎಂದು ಗುರುತಿಸಲಾಗಿದೆ.

ಸುಮಾರು ನಾಲ್ಕು ತಿಂಗಳಿಂದ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಇವರು ಮಾ.19 ರಂದು ಬೆಳಗ್ಗೆ ಹೃದಯಾಘಾತ ಅಥವಾ ಖಾಯಿಲೆಯಿಂದ ಮೃತಪಟ್ಟಿರ ಬಹುದೆಂದು ಶಂಕಿಸಲಾಗಿದೆ.

ಮೃತದೇಹ ಸಂಪೂರ್ಣ ಕೊಳೆತು ಹೋಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News