ಕಾರು ಢಿಕ್ಕಿ: ಬೈಕ್ ಸವಾರ ಮೃತ್ಯು

Update: 2019-03-21 17:28 GMT

ಉಡುಪಿ, ಮಾ.21: ಕಾರೊಂದು ಬೈಕ್‌ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಮಾ. 20ರಂದು ಸಂಜೆ ವೇಳೆ ಸಂತೆಕಟ್ಟೆಯ ದಿ ಪ್ರೈಡ್ ಕಟ್ಟಡದ ಸ್ವಲ್ಪ ಮುಂದೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಮೃತರನ್ನು ಬೈಕ್ ಸವಾರ ಮಲ್ಪೆ ತೊಟ್ಟಂ ನಿವಾಸಿ ಸಂಪತ್ ಎಂದು ಗುರು ತಿಸಲಾಗಿದೆ. ಸಹಸವಾರ ನಿತಿನ್ ಎಂಬವರು ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇವರು ಮಲ್ಪೆಯಿಂದ ಸಂತೆಕಟ್ಟೆಯಾಗಿ ಬ್ರಹ್ಮಾವರಕ್ಕೆ ಬಟ್ಟೆ ತರಲು ಬೈಕ್‌ನಲ್ಲಿ ಹೋಗುತ್ತಿರುವಾಗ ಹಿಂದಿನಿಂದ ಬಂದ ಬಿಳಿ ಬಣ್ಣದ ಕಾರು ಡಿಕ್ಕಿ ಹೊಡೆದು ಪರಾರಿಯಾಯಿತು. ಇದರ ಪರಿಣಾಮ ನಿತಿನ್ ಮತ್ತು ಸಂಪತ್ ಬೈಕ್ ಸಮೇತ ರಸ್ತೆಗೆ ಬಿದ್ದರೆನ್ನಲಾಗಿದೆ. ಇವರಲ್ಲಿ ಗಂಭೀರವಾಗಿ ಗಾಯಗೊಂಡ ಸಂಪತ್ ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು.

ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News