ಮಂಗಳೂರು: ಬಿಜೆಪಿ ಕಾರ್ಯಕರ್ತರ ಸಮಾವೇಶ

Update: 2019-03-21 17:56 GMT

ಮಂಗಳೂರು, ಮಾ. 21: ಬಿಜೆಪಿ ಮಂಗಳೂರು ನಗರ ದಕ್ಷಿಣ ಕಾರ್ಯಕರ್ತರ ಸಮಾವೇಶದವು ಗುರುವಾರ ನಗರದ ಸಂಘನಿಕೇತನದಲ್ಲಿ ನಡೆಯಿತು.

ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಂಸದ ಹಾಗೂ ದ.ಕ.ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಕಳೆದ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಅಭ್ಯರ್ಥಿಯಾಗಿದ್ದ ನರೇಂದ್ರ ಮೋದಿ ಜನಪರ ಆಡಳಿತ, ಕಪ್ಪುಹಣದ ನಿಯಂತ್ರಣದ ಮೂಲಕ ಭ್ರಷ್ಟಾಚಾರ ನಿರ್ಮೂಲನೆ ಹಾಗೂ ಕಾಂಗ್ರೆಸ್ ಮುಕ್ತ ಭಾರತ, ಸಬ್‌ಕಾ ಸಾಥ್ ಸಬ್‌ಕಾ ವಿಕಾಸ್ ಎಂಬ ಮೂರು ಭರವಸೆ ನೀಡಿದ್ದರು. ಐದು ವರ್ಷದ ಅವಧಿಯಲ್ಲಿ ತಾನು ನೀಡಿದ ಭರವಸೆಯಂತೆ ಕೆಲಸ ನಿರ್ವಹಿಸಿದ ನರೇಂದ್ರ ಮೋದಿ ಅವರನ್ನು ಈ ಬಾರಿಯ ಚುನಾವಣೆಯಲ್ಲಿ ಮತ್ತೆ ಪ್ರಧಾನಿಯನ್ನಾಗಿಸುವ ಜವಾಬ್ದಾರಿ ಬಿಜೆಪಿ ಕಾರ್ಯಕರ್ತರ ಮೇಲಿದೆ ಎಂದರು.

ದೇಶಾದ್ಯಂತ ಮೋದಿ ಅಲೆ ಪ್ರಬಲವಾಗಿದ್ದು, ಭಾರತವನ್ನು ಜಗತ್ತಿಗೆ ಮಾಗದರ್ಶನ ನೀಡುವ ರಾಷ್ಟ್ರವನ್ನಾಗಿ ಮೋದಿ ಪರಿವರ್ತಿಸಲಿದ್ದಾರೆ. ಅರಬ್ ರಾಷ್ಟ್ರದಲ್ಲೂ ಮಂದಿರ ನಿರ್ಮಾಣ ಮಾಡಿದ ಸಾಧನೆ ಮೋದಿ ಅವರದ್ದಾಗಿದೆ. ಕಾಂಗ್ರೆಸ್ ಮುಕ್ತ ಭಾರತವೆಂದರೆ ಭ್ರಷ್ಟಾಚಾರ ಮುಕ್ತ ರಾಷ್ಟ್ರ ನಿರ್ಮಾಣವಾಗಿದೆ ಎಂದು ನಳಿನ್ ಹೇಳಿದರು.

ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಿಜೆಪಿ ಜಿಲ್ಲಾಧ್ಯಕ್ಷರೂ ಆಗಿರುವ ಶಾಸಕ ಸಂಜೀವ ಮಠಂದೂರು, ಜಿಲ್ಲಾ ಉಪಾಧ್ಯಕ್ಷ ರಾದ ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ಆನಂದ ಜಿ.,ಮತ್ತು ಎಸ್‌ಸಿ ಮೋರ್ಚಾದ ಉಪಾಧ್ಯಕ್ಷ ಸಂಜೀವ, ಮಾಜಿ ಶಾಸಕ ಎನ್. ಯೋಗೀಶ್ ಭಟ್, ಲೋಕಸಭಾ ಚುನಾವಣಾ ಉಸ್ತುವಾರಿ ಗೋಪಾಲಕೃಷ್ಣ ಹೇರಳೆ, ಮುಖಂಡ ಪ್ರತಾಪಸಿಂಹ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸುದರ್ಶನ ಮೂಡುಬಿದಿರೆ, ಬ್ರಿಜೇಶ್ ಚೌಟ, ಪ್ರಮುಖರಾದ ಗಣೇಶ ಹೊಸಬೆಟ್ಟು, ಪ್ರೇಮಾನಂದ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News