ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ: ಒಂದು ನಾಮಪತ್ರ ಸಲ್ಲಿಕೆ

Update: 2019-03-21 18:23 GMT

ಚಿಕ್ಕಬಳ್ಳಾಪುರ,ಮಾ.20: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಮೂರನೇ ದಿನವಾದ ಇಂದು ಬೆಂಗಳೂರಿನ ಶಿವಪುರದ ಎಲ್. ನಾಗರಾಜ್ ಎಂಬವರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಈವರೆಗೆ ಎರಡು ನಾಮಪತ್ರಗಳು ಸಲ್ಲಿಕೆಯಾಗಿವೆ.

ನಾಮಪತ್ರ ಸಲ್ಲಿಸಲು ಮಾ.26 ರಂದು ಕೊನೆ ದಿನಾಂಕ. ಮಾರ್ಚ್ 27 ರಂದು ನಾಮಪತ್ರ ಪರಿಶೀಲನೆ ನಡೆಯುವುದು. ಮಾರ್ಚ್ 29 ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನಾಂಕವಾಗಿರುತ್ತದೆಯೆಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಅನಿರುದ್ಧ್ ಶ್ರವಣ್ ರವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News