ರಾಜ್ಯದಿಂದ ಪ್ರಧಾನಿ ಮೋದಿ ಸ್ಪರ್ಧೆ ಇಲ್ಲ: ಯಡಿಯೂರಪ್ಪ ಸ್ಪಷ್ಟನೆ

Update: 2019-03-22 12:49 GMT

ಬೆಂಗಳೂರು, ಮಾ.22: ಪ್ರಧಾನಿ ನರೇಂದ್ರ ಮೋದಿ ರಾಜ್ಯದಿಂದ ಸ್ಪರ್ಧಿಸಲ್ಲ. ಆ ಆಲೋಚನೆಯೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ ನೀಡಿದರು.

ಬಿಜೆಪಿಯವರಿಗೆ ಒಂದಂಕಿ ದಾಟಲು ಬಿಡುವುದಿಲ್ಲ ಎಂಬ ಎಚ್.ಡಿ.ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ದೇವೇಗೌಡರು ಬಾಯಿ ತಪ್ಪಿ ಹೇಳಿರಬೇಕು. ಜೆಡಿಎಸ್-ಕಾಂಗ್ರೆಸ್ ಮೈತ್ರಿಯ ಸ್ಥಿತಿಗಳನ್ನು ನೀವು ನೋಡಿರಬೇಕು. ದೇವೇಗೌಡ ಅವರು ಎಲ್ಲಿಂದ ನಿಲ್ಲಬೇಕು ಎನ್ನುವುದೇ ಇನ್ನೂ ತೀರ್ಮಾನವಾಗಿಲ್ಲ. ಈ ಬಾರಿ ನಾವು 22 ಸ್ಥಾನ ಗೆದ್ದ ಮೇಲೆ ಎಲ್ಲ ಗೊತ್ತಾಗುತ್ತದೆ. ಅವರು ಎರಡು ಅಂಕಿ ದಾಟಲ್ಲ ಎಂದು ತಿರುಗೇಟು ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News