ಚಿಕ್ಕಮಗಳೂರಿನ ನಾಗಶ್ರೀ ತ್ಯಾಗರಾಜ್ ಎಂ.ಟೆಕ್‍ನಲ್ಲಿ ರಾಜ್ಯಕ್ಕೆ ಪ್ರಥಮ

Update: 2019-03-22 13:02 GMT

ಚಿಕ್ಕಮಗಳೂರು, ಮಾ.22: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನಡೆದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರಿನ ನಾಗಶ್ರೀತ್ಯಾಗರಾಜ್ ರವರು ಎಂ.ಟೆಕ್ ಡಿಜಿಟಲ್ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಷನ್ ಸಿಸ್ಟಮ್ ಪದವಿಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್‌  ಪಡೆಯುವುದರ ಜೊತೆಗೆ ಚಿನ್ನದ ಪದಕ ಪಡೆದಿದ್ದು, ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಕರಿಸಿದ್ಧಪ್ಪನವರು ಪದಕ ನೀಡಿ ಗೌರವಿಸಿದ್ದಾರೆ.

ಎರಡು ಮಕ್ಕಳ ತಾಯಿಯಾಗಿರುವ ನಾಗಶ್ರೀ ರವರು ಡಿ.ಎ.ಸಿ.ಜಿ ಪಾಲಿಟೆಕ್ನಿಕ್‍ನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದು, ವಿಜ್ಞಾನದ ಜೊತೆಗೆ ತತ್ವಜ್ಞಾನವಾದ ಭಗವದ್ಗೀತೆ ಮತ್ತು ವೇಧ ಅದ್ಯಾಯನದಲ್ಲೂ ತೊಡಗಿಸಿಕೊಂಡಿದ್ದಾರೆ. ಇವರು ನಗರದ ಅಂಗಡಿ ವ್ಯಾಪಾರಿಗಳಾದ ನಂಜಪ್ಪ ಹೆಚ್.ಆರ್.ಮಂಜುಳ ರವರ ಸುಪುತ್ರಿಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News