ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಶೋಭಾರಿಂದ ಮೊದಲ ನಾಮಪತ್ರ ಸಲ್ಲಿಕೆ
Update: 2019-03-22 14:21 GMT
ಉಡುಪಿ, ಮಾ.22: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಮೊದಲ ನಾಮಪತ್ರವನ್ನು ಹಾಲಿ ಸಂಸದೆ ಹಾಗೂ ಸತತ ಎರಡನೇ ಬಾರಿ ಸ್ಪರ್ಧಿಸಲು ಬಿಜೆಪಿಯಿಂದ ಟಿಕೇಟ್ ಪಡೆದಿರುವ ಶೋಭಾ ಕರಂದ್ಲಾಜೆ ಶುಕ್ರವಾರ ಸಲ್ಲಿಸಿದರು.
2019ರ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ನಾಲ್ಕನೇ ದಿನವಾದ ಇಂದು ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಮೊದಲ ನಾಮಪತ್ರ ಸಲ್ಲಿಕೆಯಾಯಿತು. ಉಡುಪಿ ಮತ್ತು ಚಿಕ್ಕಮಗಳೂರು ಬಿಜೆಪಿ ಜಿಲ್ಲಾಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ ಮತ್ತು ಜೀವರಾಜ್ ಹಾಗೂ ಭಾರತಿ ಶೆಟ್ಟಿ ಅವರೊಂದಿಗೆ ಆಗಮಿಸಿದ ಶೋಭಾ ಅಪರಾಹ್ನ 1:30ರ ಸುಮಾರಿಗೆ ಎರಡುನಾಮಪತ್ರಗಳನ್ನು ಸಲ್ಲಿಸಿದರು.
ನಾಮಪತ್ರ ಸಲ್ಲಿಸಲು ಮಾ.26 ಕೊನೆಯ ದಿನವಾಗಿದ್ದು, ಮಾ.27ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಮಾ.29 ನಾಮಪತ್ರ ಹಿಂದೆಗೆದುಕೊಳ್ಳಲು ಕೊನೆಯ ದಿನವಾಗಿರುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.