ಆಕಸ್ಮಿಕ ಬೆಂಕಿ: ನಾಲ್ಕು ಗುಡಿಸಲು ಭಸ್ಮ

Update: 2019-03-22 16:30 GMT

ಮಂಡ್ಯ, ಮಾ.22: ನಗರದ ಹಾಲಹಳ್ಳಿ ಕೆರೆ ಅಂಗಳದ ನ್ಯೂ ತಮಿಳು ಕಾಲನಿಯಲ್ಲಿ 4 ಗುಡಿಸಲುಗಳಿಗೆ ಆಕಸ್ಮಿಕವಾಗಿ ಬೆಂಕಿ ತಗಲಿ ಅಪಾರ ನಷ್ಟ ಸಂಭವಿಸಿದೆ.

ಕಾಲನಿಯ ನಿವಾಸಿಗಳಾದ ಕೃಷ್ಣ, ಮುರುಗ, ಮುನ್ನಾಮಲೈ, ಬಲರಾಂ ಎಂಬುವರಿಗೆ ಸೇರಿದ ಗುಡಿಸಲುಗಳಿಗೆ ಶುಕ್ರವಾರ ಮಧ್ಯಾಹ್ನ 12 ಗಂಟೆ ಸಮಯದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ ಎಂದು ತಿಳಿದು ಬಂದಿದೆ.

ಕೃಷ್ಣ ಅವರಿಗೆ ಸೇರಿದ ಗುಡಿಸಲಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಅಕ್ಕಪಕ್ಕದ ಗುಡಿಸಲುಗಳಿಗೆ ಬೆಂಕಿ ವ್ಯಾಪಿಸಿದೆ. 4 ಕುಟುಂಬಗಳ ಸದಸ್ಯರು ಕೂಲಿ ಕಾರ್ಮಿಕರಾಗಿದ್ದು, ಗುಡಿಸಲುಗಳಲ್ಲಿ ಯಾರೂ ಇರಲಿಲ್ಲ. ಇದರಿಂದ ಯಾವುದೇ ಜೀವ ಹಾನಿ ಸಂಭವಿಸಿಲ್ಲ.

ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿ ಅಕ್ಕಪಕ್ಕದ ಗುಡಿಸಲುಗಳಿಗೆ ವ್ಯಾಪಿಸದಂತೆ ತಪ್ಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News