ಮಾ.23ರಂದು ಮಿಲಾಗ್ರಿಸ್ ಕಾಲೇಜಿನಲ್ಲಿ ಅಂತರಕಾಲೇಜು ಸಾಂಸ್ಕೃತಿಕ ಸ್ಪರ್ಧೆ ‘ಸ್ವರ್ಣ’

Update: 2019-03-22 17:22 GMT

ಉಡುಪಿ, ಮಾ.22: ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ 1 ಮತ್ತು 2ರ ವತಿಯಿಂದ ನಾಳೆ (ಮಾ.23ರಂದು) ಮಂಗಳೂರು ವಿವಿ ಮಟ್ಟದ ಎನ್ನೆಸ್ಸೆಸ್ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ‘ಸ್ವರ್ಣ-2019’ ನಡೆಯಲಿದೆ.

ಕಾರ್ಯಕ್ರಮವನ್ನು ಬೆಳಗ್ಗೆ 9:00ಕ್ಕೆ ರಾಜ್ಯ ಎನ್ನೆಸ್ಸೆಸ್ ಅಧಿಕಾರಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪದನಿಮಿತ್ತ ಜಂಟಿ ಕಾರ್ಯದರ್ಶಿ ಡಾ.ಗಣನಾಥ ಎಕ್ಕಾರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಂಗಳೂರು ವಿವಿ ರಾ.ಸೇ.ಯೋಜನೆಯ ಕಾರ್ಯಕ್ರಮ ಸಂಯೋಜನಾಧಿಕಾರಿ ಪ್ರೊ. ವಿನೀತಾ ಕೆ., ಮಿಲಾಗ್ರಿಸ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಜೆರಾಲ್ಡ್ ಪಿಂಟೋ, ಬ್ರಹ್ಮ ಬೈದರ್ಕಳ ಗರಡಿ ಕಕ್ಕುಂಜೆ ಇದರ ಅಧ್ಯಕ್ಷ ಪ್ರವೀಣ್ ಪಾಲನ್, ಮಾಜಿ ಅಧ್ಯಕ್ಷಉದಯ ಸುವರ್ಣ ಭಾಗವಹಿಸಲಿದ್ದಾರೆ.

ಮಂಗಳೂರು ವಿವಿ ಮಟ್ಟದ ಸುಮಾರು 15 ಕಾಲೇಜುಗಳು ಈ ಕಾರ್ಯಕ್ರಮದಲ್ಲಿ ಭಾವಹಿಸಲಿವೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News