ಎರಡು ಲಾರಿಗಳ ನಡುವೆ ಮುಖಾಮುಖಿ ಢಿಕ್ಕಿ: ಮೂವರು ಸ್ಥಳದಲ್ಲೇ ಮೃತ್ಯು

Update: 2019-03-23 03:37 GMT

ಸಾಗರ, ಮಾ.23: ಎರಡು ಲಾರಿಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ಮುಂಜಾವ 2 ಗಂಟೆ ಸುಮಾರಿಗೆ ಇಲ್ಲಿನ ಕಾಸ್ಪಾಡಿ ಬಳಿ ನಡೆದಿದೆ.

ಗ್ಯಾಸ್ ಸಿಲಿಂಡರ್‌ಗಳನ್ನು ಸಾಗಾಟ ಮಾಡುವ ಲಾರಿ ಮತ್ತು ಡಾಂಬರು ತುಂಬಿದ್ದ ಲಾರಿ ನಡುವೆ ಈ ಅಪಘಾತ ಸಂಭವಿಸಿದೆ. ಸಾಗರ ಕಡೆಯಿಂದ ಬರುತ್ತಿದ್ದ ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿ ಮತ್ತು ಶಿವಮೊಗ್ಗದ ಕಡೆಗೆ ಸಂಚರಿಸುತ್ತಿದ್ದ ಲಾರಿಗಳು ಮುಖಾಮುಖಿ ಢಿಕ್ಕಿಯಾಗಿವೆ. ಇದರಿಂದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.

ಅಪಫಾತದ ತೀವ್ರತೆಗೆ ಲಾರಿಗಳೆರಡು ಸಂಪೂರ್ಣ ನಜ್ಜುಗುಜ್ಜಾಗಿವೆ. ಅದೃಷ್ಟವಶಾತ್ ಗ್ಯಾಸ್ ಸಿಲಿಂಡರ್‌ಗೆ ಯಾವುದೇ ಹಾನಿಯಾಗದಿರುವುದರಿಂದ ಸಂಭಾವ್ಯ ಭಾರೀ ಅನಾಹುತ ತಪ್ಪಿದೆ.

ಅಪಘಾತದ ಹಿನ್ನೆಲೆಯಲ್ಲಿ ಶಿವಮೊಗ್ಗ- ಸಾಗರ ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ಥಗೊಂಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News