ಸಮನ್ವಯದ ಕೊರತೆ: ಮೈಸೂರಿನಲ್ಲಿ ಕಾಂಗ್ರೆಸ್-ಜೆಡಿಎಸ್ ಜಂಟಿ ಸುದ್ದಿಗೋಷ್ಠಿ ದಿಢೀರ್ ರದ್ದು

Update: 2019-03-23 06:55 GMT

ಮೈಸೂರು, ಮಾ.23: ಇಂದು ನಡೆಯಬೇಕಿದ್ದ ಕಾಂಗ್ರೆಸ್-ಜೆಡಿಎಸ್ ಜಂಟಿ ಸುದ್ದಿಗೋಷ್ಠಿ ಸಮನ್ವಯದ ಕೊರತೆಯಿಂದ ದಿಢೀರ್ ರದ್ದಾದ ಘಟನೆ ನಡೆಯಿತು.

ನಗರದ ಖಾಸಗಿ ಹೋಟೆಲ್ ನಲ್ಲಿ ಶನಿವಾರ ಪೂರ್ವಾಹ್ನ 11 ಗಂಟೆಗೆ ಸುದ್ದಿಗೋಷ್ಠಿ ಆಯೋಜನೆ ಮಾಡಲಾಗಿತ್ತು. ಉಭಯ ಪಕ್ಷಗಳ ನಾಯಕರ ಹೊಂದಾಣಿಕೆ ಕೊರತೆಯಿಂದ ಕೊನೆ ಗಳಿಗೆಯಲ್ಲಿ ಸುದ್ದಿಗೋಷ್ಠಿ ರದ್ದಾಗಿದೆ.

ಲೋಕಸಭಾ ಚುನಾವಣೆಯಲ್ಲಿ ಉಭಯ ಪಕ್ಷಗಳ ಕಾರ್ಯಕರ್ತರು ಒಂದಾಗಿ ಕಾರ್ಯನಿರ್ವಹಿಸಿ ಎಂದು ಹೇಳುವ ನಾಯಕರಲ್ಲೇ ಸಮನ್ವಯತೆ ಇಲ್ಲದಿರುವುದು ಚುನಾವಣೆಯನ್ನು ಎಷ್ಟರ ಮಟ್ಟಿಗೆ ಎದುರಿಸುತ್ತಾರೊ ಎನ್ನುವ ಪ್ರಶ್ನೆ ಎದುರಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News