ಧಾರವಾಡ ಕಟ್ಟಡ ದುರಂತ: 7 ಅಧಿಕಾರಿಗಳ ಅಮಾನತು- ಸಚಿವ ಯು.ಟಿ.ಖಾದರ್

Update: 2019-03-23 13:48 GMT

ಧಾರವಾಡ, ಮಾ.23: ಧಾರವಾಡದಲ್ಲಿ ನಿರ್ಮಾಣ ಹಂತದ ವಾಣಿಜ್ಯ ಸಂಕೀರ್ಣ ಕಟ್ಟಡ ದುರಂತ ಪ್ರಕರಣ ಸಂಬಂಧ ಇಲಾಖೆಯ 7 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಹೇಳಿದರು.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಟ್ಟಡ ಕಟ್ಟಲು ಅನುಮತಿ ನೀಡಿದ, ಸಿಸಿ ನೀಡಿದ ಸಂಬಂಧ ಇಲಾಖೆಯ 7ಜನ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಜೊತೆಗೆ ಕಟ್ಟಡದ ಮಾಲಕರು ಹಾಗೂ ಅಧಿಕಾರಿಗಳ ಮೇಲೂ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದರು.

ಈ ಕಟ್ಟಡ ಕುಸಿತ ಪ್ರಕರಣ ಅತ್ಯಂತ ದುರದೃಷ್ಟಕರ. ಸಾವು-ನೋವಿನ ದುಃಖದಲ್ಲಿ ನಾನೂ ಭಾಗಿಯಾಗುತ್ತೇನೆ ಎಂದ ಅವರು, ಕಟ್ಟಡ ದುರಂತ ಪ್ರಕರಣದಲ್ಲಿ 16 ಜನ ಸಾವನ್ನಪ್ಪಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಸರಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News