ಬಿಲ್ಲಾಡಿ ಅಕ್ರಮ ಗಣಿಗಾರಿಕೆಗೆ ದಾಳಿ
Update: 2019-03-23 15:47 GMT
ಕೋಟ, ಮಾ.23: ಬಿಲ್ಲಾಡಿ ಗ್ರಾಮದ ನೈಲಾಡಿ ಎಂಬಲ್ಲಿರುವ ಸರಕಾರಿ ಜಾಗದಲ್ಲಿ ನಡೆಯುತ್ತಿದ್ದ ಅಕ್ರಮ ಶಿಲೆ ಕಲ್ಲು ಗಣಿಗಾರಿಕೆಗೆ ಮಾ.22ರಂದು ಮಧ್ಯಾಹ್ನ ವೇಳೆ ದಾಳಿ ನಡೆಸಿದ ಪೊಲೀಸರು ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬೈಂದೂರಿನ ದಿವಾಕರ ಶೆಟ್ಟಿ ಎಂಬವರು ನಡೆಸುತ್ತಿದ್ದ ಗಣಿಗಾರಿಕೆ ಸ್ಥಳಕ್ಕೆ ಖಚಿತ ಮಾಹಿತಿಯಂತೆ ಉಡುಪಿ ಡಿವೈಎಸ್ಪಿ ಜೈಶಂಕರ ನೇತೃತ್ವದ ತಂಡ ದಾಳಿ ನಡೆಸಿದ್ದು, ಈ ವೇಳೆ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಸ್ಥಳದಲ್ಲಿದ್ದ ಹಿಟಾಚಿ ಯಂತ್ರ, ಟಿಪ್ಪರ್ ಲಾರಿ ಸೇರಿದಂತೆ ಹಲವು ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.