ಬೆಂಗಳೂರು ದಕ್ಷಿಣ ಕ್ಷೇತ್ರದಿಂದಲೇ ಸ್ಪರ್ಧಿಸಿ: ಪ್ರಧಾನಿ ಮೋದಿಗೆ ‘ಕೈ’ ಶಾಸಕಿ ಸೌಮ್ಯಾರೆಡ್ಡಿ ಆಹ್ವಾನ

Update: 2019-03-23 17:07 GMT

ಬೆಂಗಳೂರು, ಮಾ. 23: ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರು ದಕ್ಷಿಣದಿಂದ ಸ್ಪರ್ಧಿಸುವುದು ನಿಜವೇ ಆದರೆ, ದಯವಿಟ್ಟು ಬನ್ನಿ. ದಕ್ಷಿಣ ಭಾರತದ ಜನ ನಿಮ್ಮನ್ನು ಸ್ವಾಗತಿಸುತ್ತಾರೆ ಎಂದು ಕಾಂಗ್ರೆಸ್ ಶಾಸಕಿ ಸೌಮ್ಯಾರೆಡ್ಡಿ ಆಹ್ವಾನ ನೀಡಿದ್ದಾರೆ.

ಈಗಾಗಲೇ ಪ್ರಧಾನಿ ಮೋದಿ ವಾರಾಣಸಿ ಕ್ಷೇತ್ರದಿಂದ ಕಣಕ್ಕಿಳಿಯುವುದು ಖಚಿತವಾಗಿದೆ. ಆದರೆ, ಇನ್ನೊಂದು ಕ್ಷೇತ್ರ ಯಾವುದು ಎಂಬ ಪ್ರಶ್ನೆ ಉದ್ಭವಿಸಿದ್ದು, ಈ ನಡುವೆ ಬೆಂ.ದಕ್ಷಿಣದಿಂದ ಸ್ಪರ್ಧಿಸಲಿದ್ದಾರೆಂಬ ಮಾತುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಶಾಸಕಿ ಸೌಮ್ಯಾರೆಡ್ಡಿ ಮೋದಿಯವರನ್ನು ಸ್ವಾಗತಿಸಿದ್ದಾರೆ.

ಪ್ರಧಾನಿ ಮೋದಿಯವರ ಮೊದಲ ಸೋಲು ಕರ್ನಾಟಕ ರಾಜ್ಯದಿಂದಲೇ ಆರಂಭವಾಗಲಿ. ಕಳೆದ ಐದು ವರ್ಷಗಳಿಂದ ಜನವಿರೋಧಿ ಹಾಗೂ ರೈತವಿರೋಧಿ ಕೆಲಸ ಮಾಡುತ್ತಿರುವ ಬಿಜೆಪಿಗೆ ಧನ್ಯವಾದಗಳು ಎಂದು ಸೌಮ್ಯಾರೆಡ್ಡಿ ಟ್ವಿಟ್ಟರ್ ಮೂಲಕ ಟೀಕಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News