ಕಾಂಗ್ರೆಸ್ ಮುಖಂಡರ ಬೆಂಬಲ ನನಗಿದೆ: ಸುಮಲತಾ ಅಂಬರೀಶ್

Update: 2019-03-24 13:56 GMT

ಬೆಂಗಳೂರು, ಮಾ.24: ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿ ನನಗೆ ಕಾಂಗ್ರೆಸ್ ಮುಖಂಡರ ಬೆಂಬಲ ಇದೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಹೇಳಿದರು.

ರವಿವಾರ ನಗರದ ಕಂಠೀರವ ಸ್ಟುಡಿಯೋದಲ್ಲಿ ನಟ ಅಂಬರೀಷ್ ಅವರ ನಾಲ್ಕನೇ ತಿಂಗಳ ಪುಣ್ಯತಿಥಿ ಅಂಗವಾಗಿ ಪತಿಯ ಸಮಾಧಿಗೆ ಪೂಜೆ ಸಲ್ಲಿಸಿದ ಬಳಿಕ, ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಮಂಡ್ಯದಲ್ಲಿ ನನಗೆ ಕಾಂಗ್ರೆಸ್ ಮುಖಂಡರ ಬೆಂಬಲ ಇದೆ. ಕಾಂಗ್ರೆಸ್ ಕೆಲ ನಾಯಕರು ನನ್ನ ಪರ ಇದ್ದಾರೆ ಎನ್ನುವ ಕಾರಣಕ್ಕೆ ಕೆಲವರ ಉಚ್ಚಾಟನೆಗೆ ಮುಂದಾಗಿದ್ದಾರೆ. ಆದರೆ, ಕಾಂಗ್ರೆಸ್ ಯಾವುದೇ ಕ್ರಮ ಕೈಗೊಂಡರೂ, ಪಕ್ಷದ ಮುಖಂಡರು ನನ್ನ ಪರವೇ ಇರುತ್ತಾರೆ ಎಂದರು.

ಬೂತ್ ಮಟ್ಟದಲ್ಲಿ ಮತದಾರರನ್ನು ತಲುಪಲು ಯೋಜನೆ ಹಾಕಿಕೊಂಡಿದ್ದೇವೆ. ಇದಕ್ಕಾಗಿ ನಮ್ಮ ಅಭಿಮಾನಿಗಳ ತಂಡಗಳನ್ನು ರಚನೆ ಮಾಡಿದ್ದೇವೆ. ಮಹಿಳೆ ಯರಿಂದಲೂ ನನಗೆ ಬೆಂಬಲ ದೊರೆತಿದೆ. ನಾನು ಹೋದ ಕಡೆಯೆಲ್ಲ ಮಹಿಳೆಯರಿಂದ ಉತ್ತಮ ಸ್ಪಂದನೆ ಬಂದಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಬಿಜೆಪಿ ಬಹಿರಂಗವಾಗಿ ಬೆಂಬಲ ನೀಡಿರುವುದಕ್ಕೆ ಧನ್ಯವಾದ ಹೇಳಿದ ಸುಮಲತಾ, ಬಿಜೆಪಿಯಿಂದ ಬೆಂಬಲ ಸಿಗುವ ನಿರೀಕ್ಷೆ ಇತ್ತು. ನನ್ನ ಬೆಂಬಲಕ್ಕೆ ನಿಂತ ಬಿಜೆಪಿ ನಾಯಕರಿಗೆ ಧನ್ಯವಾದಗಳು. ಬಿಜೆಪಿ ನಾಯಕರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸ್ತೇನೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News