ಸುಳ್ಯ: ಎಸ್ಸೆಸ್ಸೆಫ್ ಬ್ಲೆಡ್ ಸೈಬೋ ವತಿಯಿಂದ ರಕ್ತದಾನ ಶಿಬಿರ

Update: 2019-03-24 15:20 GMT

ಸುಳ್ಯ : ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ , ಎಸ್ಸೆಸ್ಸೆಫ್ ಸುಳ್ಯ ಹಾಗೂ ಜಾಲ್ಸೂರು ಸೆಕ್ಟರ್ ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಲೇಡಿಗೋಷನ್ ಆಸ್ಪತ್ರೆ, ಮಂಗಳೂರು ಜಂಟಿ ಆಶ್ರಯದಲ್ಲಿ ಸುಳ್ಯ ಸುನ್ನಿ ಸೆಂಟರ್ ನಲ್ಲಿ ರಕ್ತದಾನ ಶಿಬಿರ ನಡೆಯಿತು.

ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಅಧ್ಯಕ್ಷ ಅಬ್ದುಲ್ಲ ಝುಹ್ರಿ ಮೊಗರ್ಪಣೆ ಅಧ್ಯಕ್ಷತೆಯಲ್ಲಿ ಎಸ್.ವೈ.ಎಸ್ ಪುತ್ತೂರು ಝೋನ್ ಕಾರ್ಯದರ್ಶಿ ಅಬ್ದುಲ್ ಹಮೀದ್ ಸುಣ್ಣಮೂಲೆ ಕಾರ್ಯಕ್ರಮ ಉದ್ಘಾಟಿಸಿದರು. 

ಸಯ್ಯದ್ ಝೈನುಲ್ ಆಬಿದೀನ್ ತಂಙಳ್ ಜಯನಗರ ದುಆ ನೆರೆವೇರಿಸಿದರು. ಎಸ್ಸೆಸ್ಸೆಫ್ ದ.ಕ ಜಿಲ್ಲಾ ಸಮಿತಿ ಕೋಶಾಧಿಕಾರಿ ಕೆ.ಎಂ.ಎಚ್ ಝುಹ್ರಿ ಕೊಂಬಾಳಿ ಸಂದೇಶ ಭಾಷಣ ಮಾಡಿದರು. ಎಸ್.ವೈ.ಎಸ್ ರಾಜ್ಯ ಸಮಿತಿ ಸದಸ್ಯರಾದ ಅಬ್ದುಲ್ ಹಮೀದ್ ಬೀಜಕೊಚ್ಚಿ, ಎಸ್.ವೈ.ಎಸ್ ಸುಳ್ಯ ಸೆಂಟರ್ ಪ್ರಧಾನ ಕಾರ್ಯದರ್ಶಿ ಅಂದುಞಿ ಗೋರಡ್ಕ, ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಪ್ರಧಾನ ಕಾರ್ಯದರ್ಶಿ ಜುನೈದ್ ಸಖಾಫಿ ಜೀರ್ಮುಕಿ, ಡಾ. ದಿನೇಶ್ ಮಂಗಳೂರು, ಪಿ.ಎ ಆರ್ಕೇಡ್ ಮಾಲಕರಾದ ಮುಹಮ್ಮದ್ ಪಿ.ಎ ಮಾತನಾಡಿದರು.

ಇದೇ ವೇಳೆ ಸುಧಾಕರ ರೈ ಬಿಳಿಯಾರು ಹಾಗೂ ಜಿಲ್ಲಾ ಬ್ಲಡ್ ಸೈಬೋ ಉಸ್ತುವಾರಿ ಕರೀಂ ಕೆದ್ಕಾರ್ ಅವರನ್ನು ಸನ್ಮಾನಿಸಲಾಯಿತು.

ಸುಳ್ಯ ಕೇಂದ್ರ ಜುಮಾ ಮಸೀದಿ ಪ್ರಧಾನ ಕಾರ್ಯದರ್ಶಿ ಹಾಜಿ ಐ ಇಸ್ಮಾಯೀಲ್, ಎಸ್.ವೈ.ಎಸ್ ಸುಳ್ಯ ಸೆಂಟರ್ ಸಮಿತಿ ಅಧ್ಯಕ್ಷರಾದ ಎ.ಬಿ ಅಶ್ರಫ್ ಸಅದಿ, ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಅಧ್ಯಕ್ಷರಾದ ಇಬ್ರಾಹೀಂ ಅಂಜದಿ ಮಂಡೆಕೋಲು, ದ.ಕ ಜಿಲ್ಲಾ ಎಸ್ಸೆಸ್ಸೆಫ್ ಮಾಜಿ ಪ್ರಧಾನ ಕಾರ್ಯದರ್ಶಿ ಶಮೀರ್ ಮೊಗರ್ಪಣೆ, ಎಸ್.ವೈ.ಎಸ್ ಸುಳ್ಯ ಬ್ರಾಂಚ್ ಪ್ರಧಾನ ಕಾರ್ಯದರ್ಶಿ ರಫೀಕ್ ಚಾಯ್ಸ್, ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಮಾಜಿ ಅಧ್ಯಕ್ಷರಾದ ಜುನೈದ್ ಎನ್.ಎ, ಸುಳ್ಯ ಯೂತ್ ಕಾಂಗ್ರೆಸ್ ಉಪಾಧ್ಯಕ್ಷರಾದ ಶಾಫಿ ಕುತ್ತಮಟ್ಟೆ, ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಕಾರ್ಯದರ್ಶಿ ನೌಶಾದ್ ಕೆರೆಮೂಲೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಮಾಲಿಕ್ ಕೊಯಂಗಿ ಕಾರ್ಯಕ್ರಮ ನಿರೂಪಿಸಿದರು. ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಉಪಾಧ್ಯಕ್ಷರಾದ ಸಿದ್ದೀಕ್ ಗೂನಡ್ಕ ಸ್ವಾಗತಿಸಿ ಎಸ್ಸೆಸ್ಸೆಫ್ ಜಾಲ್ಸೂರು ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಸಫ್ವಾನ್ ಸುಣ್ಣಮೂಲೆ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News