×
Ad

ಬಿ.ಸಿ.ರೋಡ್: ಹೊಂಡಕ್ಕೆ ಬಿದ್ದ ಕಾರು; ಓರ್ವ ಮೃತ್ಯು, ಐವರಿಗೆ ಗಾಯ

Update: 2019-03-24 22:09 IST

ಬಂಟ್ವಾಳ, ಮಾ. 24: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೊಂಡಕ್ಕೆ ಬಿದ್ದು ಓರ್ವ ಮೃತಪಟ್ಟು, ಒಂದೇ ಮನೆಯ ಐವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡಿನ ಮುಖ್ಯ ವೃತ್ತದ ಸಮೀಪ ರವಿವಾರ ಸಂಭವಿಸಿದೆ.

ಮಂಗಳೂರು ಬಜಾಲ್ ನಿವಾಸಿ ಕೆ.ಎಂ. ಶರೀಫ್ ಮೃತರು ಎಂದು ಗುರುತಿಸಲಾಗಿದೆ.

ಶರೀಫ್ ಅವರ ಪತ್ನಿ ಮತ್ತು ಮಕ್ಕಳು ಗಂಭೀರ ಗಾಯಗೊಂಡಿದ್ದು, ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಪುತ್ತೂರಿನಲ್ಲಿರುವ ಸಂಬಂಧಿಕರೊಬ್ಬರ ಗೃಹಪ್ರವೇಶ ಕಾರ್ಯಕ್ರಮ ಮುಗಿಸಿ, ವಾಪಸು ಮಂಗಳೂರು ಕಡೆಗೆ ಹೋಗುವ ವೇಳೆ ಬಿ.ಸಿ.ರೋಡಿನಲ್ಲಿ ಈ ಅಪಘಾತ ಸಂಭವಿಸಿದೆ.

ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News