ಅತ್ಯಧಿಕ ಮತಗಳಿಂದ ವಿಜಯಶಂಕರ್, ಧ್ರುವನಾರಾಯಣ್ ಗೆಲುವು: ಡಾ.ಎಚ್.ಸಿ.ಮಹದೇವಪ್ಪ

Update: 2019-03-24 17:53 GMT

ಮೈಸೂರು,ಮಾ.24: ಮೈಸೂರು ಮತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಯಿಂದ ಆರ್.ಧ್ರುವನಾರಾಯಣ್ ಮತ್ತು ಸಿ.ಎಚ್.ವಿಜಯಶಂಕರ್ ಅತ್ಯಧಿಕ ಮತಗಳಿಂದ ಜಯ ಸಾಧಿಸಲಿದ್ದಾರೆ ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ವಿಶ್ವಾಸ ವ್ಯಕ್ತಪಡಿಸಿದರು. 

ನಗರದಲ್ಲಿ ರವಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಮೈತ್ರಿಯಿಂದ ನಮ್ಮ ಪಕ್ಷದ ಅಭ್ಯರ್ಥಿಗಳು ಅತೀ ಹೆಚ್ಚು ಮತಗಳಿಂದ ಆಯ್ಕೆಯಾಗಲಿದ್ದಾರೆ. ಚಾಮರಾಜನಗರದಲ್ಲಿ ಆರ್.ಧ್ರುವನಾರಾಯಣ್ ವಿರುದ್ಧ ಯಾರೇ ಸ್ಪರ್ಧೆ ಮಾಡಿದರೂ ಧ್ರುವ ಗೆಲುವು ಶತ ಸಿದ್ಧ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News