ನಳಿನ್ ಕುಮಾರ್ ಕಟೀಲು ನಾಮಪತ್ರ ಸಲ್ಲಿಕೆ

Update: 2019-03-25 07:00 GMT

ಮಂಗಳೂರು ಮಾ.25:- ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಳಿನ್ ಕುಮಾರ್ ಕಟೀಲ್ ಅವರು ಇಂದು ಬೆಳಗ್ಗೆ ನಾಮಪತ್ರ ಸಲ್ಲಿಸಿದರು.

ನಳಿನ್ ಅವರು ಜಿಲ್ಲಾ ಚುನಾವಣಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಪಕ್ಷದ ಮುಖಂಡರಾದ ಮೋನಪ್ಪ ಭಂಡಾರಿ, ಸುನೀಲ್ ಕುಮಾರ್, ಸಂಜೀವ ಮಠಂದೂರು, ಪುರುಷೋತ್ತಮ ಭಟ್ ಉಪಸ್ಥಿತರಿದ್ದರು.

ಮೂರನೆ ಬಾರಿಯೂ ಜಯ ಗಳಿಸುತ್ತೇನೆ

  ಕಾರ್ಯಕರ್ತರ ಆಶೀರ್ವಾದ, ಮತದಾರರ ಬೆಂಬಲದಿಂದ ಮೂರನೆ ಬಾರಿಗೆ ಲೋಕಸಭೆಗೆ ಸ್ಪರ್ಧಿ ಸುವ ಅವಕಾಶ ದೊರೆತಿದೆ. ಮೂರನೆ ಬಾರಿಯೂ ಜಯ ಗಳಿಸುತ್ತೇನೆ ಎಂದು ನಳಿನ್ ಕುಮಾರ್ ಕಟೀಲು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರ ಐದು ವರ್ಷಗಳ ಆಡಳಿತ, ಸಾಧನೆ, ಜಿಲ್ಲೆಯ ಅಭಿವೃದ್ಧಿಗೆ ನೀಡಿರುವ ಕೊಡುಗೆಗಳಿಗಾಗಿ ಮತದಾರರು ಮತ್ತೆ ನನ್ನನ್ನು ಬೆಂಬಲಿಸುತ್ತಾರೆ ಎನ್ನುವ ವಿಶ್ವಾಸ ಇದೆ ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News