ಯಡಿಯೂರಪ್ಪರನ್ನು ಭೇಟಿಯಾದ ಸುಮಲತಾ

Update: 2019-03-25 06:27 GMT

ಬೆಂಗಳೂರು, ಮಾ.25: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸುಮಲತಾ ಅಂಬರೀಶ್ ಇಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಡಾಲರ್ಸ್ ಕಾಲನಿ ನಿವಾಸದಲ್ಲಿ ಭೇಟಿಯಾದರು.

ಬಳಿಕ ಮಾಧ್ಯಮದರೊಂದಿಗೆ ಮಾತನಾಡಿದ ಸುಮಲತಾ, ಚುನಾವಣೆಯಲ್ಲಿ ಯಡಿಯೂರಪ್ಪಅವರು ಬೆಂಬಲಿಸುವುದಾಗಿ ಹೇಳಿದ್ದಾರೆ. ಅದಕ್ಕೆ ಥ್ಯಾಂಕ್ಸ್ ಹೇಳಿ ಆಶೀರ್ವಚನ ಪಡೆಯಲು ಬಂದಿದ್ದೇನೆ. ಪ್ರಚಾರಕ್ಕೆ ಬರುವ ಕುರಿತಂತೆ ಅವರೊಂದಿಗೆ ಯಾವುದೇ ಮಾತುಕತೆ ಮಾಡಿಲ್ಲ ಎಂದರು.

ಬಿಜೆಪಿಯವರು ನಮಗೆ ಬೇಷರತ್ ಬೆಂಬಲ ಕೊಟ್ಟಿದ್ದಾರೆ. ನಾವು ಅಂಬರೀಶ್ ಮೇಲಿನ ಗೌರವಕ್ಕೆ ಬೆಲೆ ಕೊಟ್ಟು ಬೆಂಬಲ ಕೊಡ್ತೀವಿ ಅಂದಿದ್ದಾರೆ. ಮಂಡ್ಯದಲ್ಲಿ ಕೆಲವು ಕಾಂಗ್ರೆಸ್ ನಾಯಕರು ಕೂಡಾ ನನಗೆ ಸಪೋರ್ಟ್ ಮಾಡ್ತಿದ್ದಾರೆ ಎಂದು ಸುಮಲತಾ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News