ಪಾದಚಾರಿಗೆ ಟಿಪ್ಪರ್ ಢಿಕ್ಕಿ: ತೀವ್ರ ಗಾಯ

Update: 2019-03-25 12:58 GMT

ಚಾಮರಾಜನಗರ,ಮಾ.25: ರಸ್ತೆ ದಾಟುತ್ತಿದ್ದ ಪಾದಚಾರಿಗೆ ಟಿಪ್ಪರ್ ಢಿಕ್ಕಿ ಹೊಡೆದು ತೀವ್ರ ಗಾಯಗೊಂಡಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಕೆ ಪಿಟಿ ಹೋಟೆಲ್ ಬಳಿ ಸಂಭವಿಸಿದೆ.

ಗುಂಡ್ಲುಪೇಟೆ ಪಟ್ಟಣದ ದುಂದಾಸನಪುರ ಬಡಾವಣೆಯ ಬಸವರಾಜು(55) ಸೋಮವಾರ ಸಂಜೆ 4 ಗಂಟೆ ಸಮಯದಲ್ಲಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಸಾಗುತ್ತಿದ್ದ ಟಿಪ್ಪರ್ ಢಿಕ್ಕಿ ಹೊಡೆದಿದೆ. ಘಟನೆ ನಂತರ ಚಾಲಕ ಟಿಪ್ಪರ್ ಬಿಟ್ಟು ಪರಾರಿಯಾಗಿದ್ದಾನೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಾಯಾಳುವನ್ನು ಸಾರ್ವಜನಿಕ ಆಸ್ಪತ್ರೆಯ ಕರೆದೊಯ್ದರು. ಈ ಬಗ್ಗೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News