ಹಾಸನ ಬಿಜೆಪಿ ಅಭ್ಯರ್ಥಿ ಎ.ಮಂಜು ನಾಮಪತ್ರ ಸಲ್ಲಿಕೆ

Update: 2019-03-25 18:47 GMT

ಹಾಸನ, ಮಾ.25: ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಎ.ಮಂಜು ಸೋಮವಾರ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸುವ ಮೊದಲು ನಡೆದ ಮೆರವಣಿಗೆಗೆ ಜನ ಸಾಗರ ಹರಿದು ಬಂತು. ಎ.ಮಂಜು ನಾಮಪತ್ರ ಸಲ್ಲಿಸುವ ಸಮಯದಲ್ಲಿ ಸೇರಿದ ಸಾವಿರಾರು ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಜೈಕಾರದ ಘೋಷಣೆ ಕೂಗಿದರು. ಗ್ರಾಮೀಣ ರೈತರು ಎತ್ತಿನಗಾಡಿಯೊಂದಿಗೆ ಬಂದರೆ ಅನೇಕರು ಮೋದಿಯ ಮುಖವಾಡ ಧರಿಸಿದ್ದರು. ಕೆಲವರು ಮೈ ಪೂರ್ಣ ಬಿಜೆಪಿ ಕೇಸರಿ ಬಣ್ಣ ಬಳಿದುಕೊಂಡು ಗಮನಸೆಳೆದರು. ವಿವಿಧ ಸಾಂಸ್ಕತಿಕ ಕಲಾತಂಡಗಳು, ಡಿಜಿ ಸೌಂಡ್, ಡೊಳ್ಳು ಭಾರಿಸುವುದಕ್ಕೆ ಕಾರ್ಯಕರ್ತರು ನೃತ್ಯ ಮಾಡುತ್ತಿದ್ದರು.

ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಎ.ಮಂಜು ನಾಮಪತ್ರ ಸಲ್ಲಿಸುವ ವೇಳೆ ಶಾಸಕ ಪ್ರೀತಮ್ ಜೆ. ಗೌಡ, ಸುಶೀಲ ಅಣ್ಣಪ್ಪ ಇತರರು ಉಪಸ್ಥಿತರಿದ್ದರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೆರವಣಿಗೆಯಲ್ಲಿ ತೆರೆದ ವಾಹನದಲ್ಲಿ ಆಗಮಿಸಿ ಕಾರ್ಯಕರ್ತರಿಗೆ ಹುರುಪು ತುಂಬಿದರು. ಎ.ಮಂಜು ನಾಮಪತ್ರ ಸಲ್ಲಿಸುವ ಮೊದಲು ಮಹಾರಾಜ ಪಾರ್ಕ್ ರಸ್ತೆ ಬಳಿ ಇರುವ ಶ್ರಿ ಸೀತರಾಮಾಂಜನೇಯ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News