ಮನ್ನಾರ್ ಗುಡಿ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ; 7 ಸಾವು
Update: 2019-03-27 19:18 IST
ಚೆನ್ನೈ, ಮಾ.27: ತಮಿಳುನಾಡಿನ ಮನ್ನಾರ್ ಗುಡಿಯ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮವಾಗಿ 7 ಮಂದಿ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ಸಂಭವಿಸಿದೆ. ಸುರೇಶ್ , ಬಾಬು, ಸಿಂಗಾರವೇಲು, ಮೋಹನ್, ಹರಿವು, ವೀರಾಯನ್ ಈ ದುರ್ಘಟನೆಯಲ್ಲಿ ಮೃತಪಟ್ಟಿದ್ದಾರೆ. ಇನ್ನೊಬ್ಬರ ಗುರುತು ಪತ್ತೆಯಾಗಿಲ್ಲ, 12ಕ್ಕೂ ಅಧಿಕ ಮಂದಿ ಗಾಯಗೊಂಡು ಮನ್ನಾರಗುಡಿ ಜನರಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.