ಸುಳ್ಯ: ಬಿಜೆಪಿ ಪೇಜ್ ಪ್ರಮುಖ ಕಾರ್ಯಕರ್ತರ ಸಮಾವೇಶ

Update: 2019-03-28 08:28 GMT

ಸುಳ್ಯ, ಮಾ.28: ಲೋಕಸಭಾ ಚುನಾವಣೆಯ ಪೂರ್ವ ಬಾವಿಯಾಗಿ ಬಿಜೆಪಿ ಪೇಜ್ ಪ್ರಮುಖ ಕಾರ್ಯಕರ್ತರ ಸಮಾವೇಶ ಸುಳ್ಯದ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ನಡೆಯಿತು

 ಬಿಜೆಪಿಯ ಹಿರಿಯರಾದ ಬಿ.ಕೆ.ರಮೇಶ್ ಕಾರ್ಯ ಕ್ರಮಕ್ಕೆ ಚಾಲನೆ ನೀಡಿದರು.

ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ಅಂಗಾರ, ಪ್ರಮುಖರಾದ ಗಣೇಶ್ ಕಾರ್ಣಿಕ್, ಪ್ರತಾಪ್ ಸಿಂಹ ನಾಯಕ್, ಮೂಡುಬಿದಿರೆ ಶಾಸಕ ಉಮನಾಥ್ ಕೋಟ್ಯಾನ್, ಚುನಾವಣಾ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಮಾಜಿ ಶಾಸಕ ಯೋಗೀಶ್ ಭಟ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಹಾಗೂ ಶಾಸಕ ಸಂಜೀವ ಮಠOದೂರು,  ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರವಿಶಂಕರ್ ಮಿಜಾರು, ವಕ್ತಾರ ಪ್ರತಾಪ್ ಸಿಂಹ, ಜಿಲ್ಲಾ ಕಾರ್ಯದರ್ಶಿ ಬ್ರಿಜೇಶ್ ಚೌಟ, ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News