ನೀರಿನ ಸಂಪಿಗೆ ಬಿದ್ದು ಇಬ್ಬರು ಮಕ್ಕಳು ಮೃತ್ಯು

Update: 2019-03-28 15:51 GMT

ಬೆಂಗಳೂರು, ಮಾ.28: ಆಕಸ್ಮಿಕವಾಗಿ ನೀರಿನ ಸಂಪಿಗೆ ಬಿದ್ದು, ಒಂದೂವರೆ ವರ್ಷದ ಹೆಣ್ಣು ಮಗು ಸೇರಿ ಇಬ್ಬರು ಮಕ್ಕಳು ಮೃತಪಟ್ಟಿರುವ ದುರ್ಘಟನೆ ಇಲ್ಲಿನ ಕೆಆರ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಯಾದಗಿರಿ ಜಿಲ್ಲೆಯ ಚಿಂತಕುಂಟಾ ಗ್ರಾಮದ ಮಲ್ಲಪ್ಪ ಹಾಗೂ ಕವಿತಾ ದಂಪತಿಯ ಪುತ್ರಿ ಬಸಮ್ಮ(1), ಪುತ್ರ ನವೀನ್(5) ಮೃತ ಪುಟ್ಟ ಮಕ್ಕಳು ಎಂದು ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಅಬ್ದುಲ್ ಅಹದ್ ತಿಳಿಸಿದ್ದಾರೆ.

ಕೆಆರ್‌ಪುರ ವ್ಯಾಪ್ತಿಯಲ್ಲಿ ನಿರ್ಮಿಸುತ್ತಿದ್ದ ಕಟ್ಟಡವೊಂದರಲ್ಲಿ ಕವಿತಾ ಮತ್ತು ಈಕೆಯ ಸಹೋದರ ಭೀಮಪ್ಪ ಅವರು ಕೆಲಸ ಮಾಡುತ್ತಿದ್ದರು. ಗುರುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಇದೇ ಕಟ್ಟಡದಲ್ಲಿದ್ದ ಸಂಪಿಗೆ ಮಕ್ಕಳು ಬಿದ್ದು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಸಂಬಂಧ ದೂರು ದಾಖಲಿಸಿಕೊಂಡಿರುವ ಕೆಆರ್‌ಪುರ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News