ಪ್ರತ್ಯೇಕ ರಸ್ತೆ ಅಪಘಾತ: ಇಬ್ಬರು ಮೃತ್ಯು

Update: 2019-03-28 18:03 GMT

ಶಿವಮೊಗ್ಗ, ಮಾ. 28: ಜಿಲ್ಲೆಯ ಶಿಕಾರಿಪುರ ಹಾಗೂ ರಿಪ್ಪನ್‍ಪೇಟೆಯಲ್ಲಿ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತ ಪ್ರಕರಣಗಳಲ್ಲಿ ಇಬ್ಬರು ಮೃತಪಟ್ಟು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. 

ಶಿಕಾರಿಪುರ: ತಾಲೂಕಿನ ಕಣಿವೆಮನೆ ಗ್ರಾಮ ಸಮೀಪ ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ, ಪುನೇದಹಳ್ಳಿ ಗ್ರಾಮದ ನಿವಾಸಿ ನಾಗರಾಜ್ ಎಂಬುವರು ಮೃತಪಟ್ಟಿರುವ ಘಟನೆ ನಡೆದಿದೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಹೊಸನಗರ ವರದಿ: ತಾಲೂಕಿನ ರಿಪ್ಪನ್‍ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಶಾಂತಪೂರ ಗ್ರಾಮದ ಸಮೀಪ ಮಿನಿ ಟ್ರ್ಯಾಕ್ಟರ್‍ವೊಂದು ರಸ್ತೆ ಬದಿ ನಿಂತಿದ್ದವರಿಗೆ ಧಿಕ್ಕಿ ಹೊಡೆದಿದ್ದು, ಇದರಲ್ಲಿ ಮುಂಬಾರು ಗ್ರಾಮದ ಬೈಸಗುಂದ ನಿವಾಸಿ ಮಂಜಪ್ಪಗೌಡ (45) ಎಂಬುವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಟ್ರ್ಯಾಕ್ಟರ್ ಚಾಲಕ ಹಾಗೂ ರಸ್ತೆ ಬದಿ ನಿಂತಿದ್ದ ವ್ಯಕ್ತಿಗೂ ಗಂಭೀರವಾದ ಗಾಯವಾಗಿದ್ದು, ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News